ಹುತಾತ್ಮ ಪಿ.ಎಸ್.ಐ ಜಗದೀಶ್ ರವರ 9ನೇ ವರ್ಷದ ಪುಣ್ಯ ಸ್ಮರಣೆ

ಕರ್ತವ್ಯದ ವೇಳೆ ದುಷ್ಟರಿಂದ ಹುತಾತ್ಮರಾದ ಪಿ.ಎಸ್.ಐ ಜಗದೀಶ್ ರವರ 9ನೇ ವರ್ಷದ ಪುಣ್ಯ ಸ್ಮರಣೆ ದಿನಾಚರಣೆಯನ್ನು ನಗರದ ಹೊರವಲಯದ ಡಿ.ಕ್ರಾಸ್ ಬಳಿಯ ಪಿ ಎಸ್ ಐ ಜಗದೀಶ ವೃತ್ತದಲ್ಲಿ ಆಯೋಜನೆ ಮಾಡಲಾಗಿತ್ತು.

ಕಾರ್ಯಕ್ರಮದಲ್ಲಿ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ ಘಟ್ಟ ರವಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರು ಹಾಗು ಬೇರೆ ರಾಜ್ಯಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡಲು ಕಷ್ಟವಾಗಿದೆ. ಆದ್ದರಿಂದ, ಉನ್ನತ ಅಧಿಕಾರಿಗಳಿಂದ ಸಹಾಯ ಪಡೆದು ಹುತಾತ್ಮ ಪಿ ಎಸ್ ಐ ಜಗದೀಶ್ ರವರ ಹೆಸರಿನಲ್ಲಿ ಐ ಎ ಎಸ್, ಐ ಪಿ ಎಸ್ ಹಾಗು ಕೆ ಪಿ ಎಸ್ ಸಿ‌ ಪರೀಕ್ಷೆಗಳ ತರಬೇತಿ ತೆರೆದು ನುರಿತ ಶಿಕ್ಷಕರಿಂದ ಶಿಕ್ಷಣ ನೀಡಲಾಗುವುದು ಎಂದರು..

ನಂತರ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸಾಧಿಕ್ ಪಾಷ ಮಾತನಾಡಿ, ಅಹಿತಕರ ಘಟನೆಗಳು ನಡೆದ ಸಂದರ್ಭದಲ್ಲಿ ನಾವು ಸಮಾಜದಲ್ಲಿ ತಪ್ಪು ಮಾಡಿದವರ ಮೇಲೆ ಕಠಿಣವಾಗಿ ನಡೆದುಕೊಳ್ಳಬೇಕಾಗುತ್ತದೆ.‌ ಆದರೆ, ಅದು ದುರುದ್ದೇಶದಿಂದ ಅಲ್ಲ, ದೊಡ್ಡಬಳ್ಳಾಪುರದ ಒಬ್ಬ ಅಧಿಕಾರಿಗೆ ಈ ತರಹದ ಗೌರವ ನೀಡಿತ್ತಿರುವುದು ಹೆಮ್ಮೆಯ ವಿಚಾರ ಎಂದರು.

ಪಿಎಸ್ಐ ಜಗದೀಶ್ ರವರ ಒಂಭತ್ತನೆ ಹುತಾತ್ಮ ದಿನಾಚರಣೆ ಅಂಗವಾಗಿ ನಗರ‌ ಠಾಣೆ ಪಿಎಸ್ಐ ಕೃಷ್ಣಪ್ಪ, ಎಎಸ್ಐ ಕೃಷ್ಣಮೂರ್ತಿ ಪೇದೆಗಳಾದ ಪಾಂಡುರಂಗ, ಪ್ರಕಾಶ್ ಹಾಗೂ ಯೋಗಶ್ರೀ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ವಿದ್ಯಾ ವಿಭಾ ರಾಥೋಡ್, ನಗರಸಭಾ ಉಪಾಧ್ಯಕ್ಷ ಮಲ್ಲೇಶ್ ಹಾಗು ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿ ಚಂದ್ರು ಉಪ್ಪಾರ್, ಹುತಾತ್ಮ ಪಿ ಎಸ್ ಐ ಜಗದೀಶರವರ ಮಡದಿ, ಮಕ್ಕಳು ಹಾಗು ಸಾರ್ವಜನಿಕರು ಹಾಜರಿದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

6 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

9 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

22 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

23 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago