ಕರ್ತವ್ಯದ ವೇಳೆ ದುಷ್ಟರಿಂದ ಹುತಾತ್ಮರಾದ ಪಿ.ಎಸ್.ಐ ಜಗದೀಶ್ ರವರ 9ನೇ ವರ್ಷದ ಪುಣ್ಯ ಸ್ಮರಣೆ ದಿನಾಚರಣೆಯನ್ನು ನಗರದ ಹೊರವಲಯದ ಡಿ.ಕ್ರಾಸ್ ಬಳಿಯ ಪಿ ಎಸ್ ಐ ಜಗದೀಶ ವೃತ್ತದಲ್ಲಿ ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ ಘಟ್ಟ ರವಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರು ಹಾಗು ಬೇರೆ ರಾಜ್ಯಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡಲು ಕಷ್ಟವಾಗಿದೆ. ಆದ್ದರಿಂದ, ಉನ್ನತ ಅಧಿಕಾರಿಗಳಿಂದ ಸಹಾಯ ಪಡೆದು ಹುತಾತ್ಮ ಪಿ ಎಸ್ ಐ ಜಗದೀಶ್ ರವರ ಹೆಸರಿನಲ್ಲಿ ಐ ಎ ಎಸ್, ಐ ಪಿ ಎಸ್ ಹಾಗು ಕೆ ಪಿ ಎಸ್ ಸಿ ಪರೀಕ್ಷೆಗಳ ತರಬೇತಿ ತೆರೆದು ನುರಿತ ಶಿಕ್ಷಕರಿಂದ ಶಿಕ್ಷಣ ನೀಡಲಾಗುವುದು ಎಂದರು..
ನಂತರ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸಾಧಿಕ್ ಪಾಷ ಮಾತನಾಡಿ, ಅಹಿತಕರ ಘಟನೆಗಳು ನಡೆದ ಸಂದರ್ಭದಲ್ಲಿ ನಾವು ಸಮಾಜದಲ್ಲಿ ತಪ್ಪು ಮಾಡಿದವರ ಮೇಲೆ ಕಠಿಣವಾಗಿ ನಡೆದುಕೊಳ್ಳಬೇಕಾಗುತ್ತದೆ. ಆದರೆ, ಅದು ದುರುದ್ದೇಶದಿಂದ ಅಲ್ಲ, ದೊಡ್ಡಬಳ್ಳಾಪುರದ ಒಬ್ಬ ಅಧಿಕಾರಿಗೆ ಈ ತರಹದ ಗೌರವ ನೀಡಿತ್ತಿರುವುದು ಹೆಮ್ಮೆಯ ವಿಚಾರ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ವಿದ್ಯಾ ವಿಭಾ ರಾಥೋಡ್, ನಗರಸಭಾ ಉಪಾಧ್ಯಕ್ಷ ಮಲ್ಲೇಶ್ ಹಾಗು ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿ ಚಂದ್ರು ಉಪ್ಪಾರ್, ಹುತಾತ್ಮ ಪಿ ಎಸ್ ಐ ಜಗದೀಶರವರ ಮಡದಿ, ಮಕ್ಕಳು ಹಾಗು ಸಾರ್ವಜನಿಕರು ಹಾಜರಿದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…