ಕರ್ತವ್ಯದ ವೇಳೆ ದುಷ್ಟರಿಂದ ಹುತಾತ್ಮರಾದ ಪಿ.ಎಸ್.ಐ ಜಗದೀಶ್ ರವರ 9ನೇ ವರ್ಷದ ಪುಣ್ಯ ಸ್ಮರಣೆ ದಿನಾಚರಣೆಯನ್ನು ನಗರದ ಹೊರವಲಯದ ಡಿ.ಕ್ರಾಸ್ ಬಳಿಯ ಪಿ ಎಸ್ ಐ ಜಗದೀಶ ವೃತ್ತದಲ್ಲಿ ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮದಲ್ಲಿ ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ ಘಟ್ಟ ರವಿ ಮಾತನಾಡಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರು ಹಾಗು ಬೇರೆ ರಾಜ್ಯಗಳಿಗೆ ಹೋಗಿ ವಿದ್ಯಾಭ್ಯಾಸ ಮಾಡಲು ಕಷ್ಟವಾಗಿದೆ. ಆದ್ದರಿಂದ, ಉನ್ನತ ಅಧಿಕಾರಿಗಳಿಂದ ಸಹಾಯ ಪಡೆದು ಹುತಾತ್ಮ ಪಿ ಎಸ್ ಐ ಜಗದೀಶ್ ರವರ ಹೆಸರಿನಲ್ಲಿ ಐ ಎ ಎಸ್, ಐ ಪಿ ಎಸ್ ಹಾಗು ಕೆ ಪಿ ಎಸ್ ಸಿ ಪರೀಕ್ಷೆಗಳ ತರಬೇತಿ ತೆರೆದು ನುರಿತ ಶಿಕ್ಷಕರಿಂದ ಶಿಕ್ಷಣ ನೀಡಲಾಗುವುದು ಎಂದರು..
ನಂತರ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯ ಇನ್ಸ್ಪೆಕ್ಟರ್ ಸಾಧಿಕ್ ಪಾಷ ಮಾತನಾಡಿ, ಅಹಿತಕರ ಘಟನೆಗಳು ನಡೆದ ಸಂದರ್ಭದಲ್ಲಿ ನಾವು ಸಮಾಜದಲ್ಲಿ ತಪ್ಪು ಮಾಡಿದವರ ಮೇಲೆ ಕಠಿಣವಾಗಿ ನಡೆದುಕೊಳ್ಳಬೇಕಾಗುತ್ತದೆ. ಆದರೆ, ಅದು ದುರುದ್ದೇಶದಿಂದ ಅಲ್ಲ, ದೊಡ್ಡಬಳ್ಳಾಪುರದ ಒಬ್ಬ ಅಧಿಕಾರಿಗೆ ಈ ತರಹದ ಗೌರವ ನೀಡಿತ್ತಿರುವುದು ಹೆಮ್ಮೆಯ ವಿಚಾರ ಎಂದರು.
ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿ ವಿದ್ಯಾ ವಿಭಾ ರಾಥೋಡ್, ನಗರಸಭಾ ಉಪಾಧ್ಯಕ್ಷ ಮಲ್ಲೇಶ್ ಹಾಗು ದೊಡ್ಡಬಳ್ಳಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಡಿ ಚಂದ್ರು ಉಪ್ಪಾರ್, ಹುತಾತ್ಮ ಪಿ ಎಸ್ ಐ ಜಗದೀಶರವರ ಮಡದಿ, ಮಕ್ಕಳು ಹಾಗು ಸಾರ್ವಜನಿಕರು ಹಾಜರಿದ್ದರು.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…