ಹುತಾತ್ಮ ವೀರಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ರವರ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಮೇಣದಬತ್ತಿ ಬೆಳಗುವ ಮೂಲಕ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಗೌರವ ನಮನ ಸಲ್ಲಿಸಲಾಯಿತು.
ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ಉಗ್ರರೊಂದಿಗೆ ನಡೆದ ಕಾಳಗದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ರವರು ದೇಶದ ಹೆಮ್ಮೆಯ ವೀರ. ಇಂತಹ ವೀರಯೋಧರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ದೇಶದ ಶಾಂತಿಯನ್ನು ಕದಡುವ ಉಗ್ರರ ವಿರುದ್ಧದ ಹೋರಾಟದಲ್ಲಿ ತಮ್ಮ ಪ್ರಾಣತ್ಯಾಗ ಮಾಡಿರುವುದು ದೇಶಕ್ಕೆ ತುಂಬಲಾರದ ನಷ್ಟ, ಗಡಿಕಾಯುವ ನಮ್ಮ ದೇಶದ ಯೋಧರ ಜೋತೆ ನಾವೆಲ್ಲರೂ ಇದ್ದೇವೆ ಎಂಬುದೆ ಈ ಗೌರವ ಸಮರ್ಪಣೆ, ಸರ್ಕಾರ ಈ ನಮ್ಮ ಯೋಧರ ಬಲಿದಾನಕ್ಕೆ ತಕ್ಕ ಉತ್ತರ ನೀಡಲಿ ಎಂದು ಕನ್ನಡ ಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ನಂಜಪ್ಪ ಭಾವುಕರಾದರು.
ಕನ್ನಡ ಪರ ಹೋರಾಟಗಾರ್ತಿ ಪ್ರಮೀಳಾ ಮಹದೇವ್ ಮಾತನಾಡಿ, ಸದಾ ದೇಶದ ರಕ್ಷಣೆಯಲ್ಲಿ ತೊಡಗಿರುವ ಯೋಧರು ನಮಗೆ ನಿಜವಾದ ನಾಯಕರು, ರಕ್ತಪಿಶಾಚಿ ಉಗ್ರರೊಂದಿಗೆ ಹೋರಾಡಿ ಹುತಾತ್ಮರಾಗಿರುವ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ರವರ ತ್ಯಾಗ ಯುವ ಪೀಳಿಗೆಗೆ ಮಾದರಿ. ದೇಶಕ್ಕಾಗಿ ಪ್ರಾಣವನ್ನು ಲೆಕ್ಕಿಸದೆ ಹೋರಾಟ ಮಾಡಿ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿ ಅಮರರಾದ ಅವರನ್ನು ಸ್ಮರಿಸಿ ಅವರ ದೇಶ ಪ್ರೇಮಕ್ಕೆ ನಮನ ಸಲ್ಲಿಸುವ ಮೂಲಕ ಪ್ರತಿಯೊಬ್ಬ ಯುವಕರಲ್ಲಿ ದೇಶಪ್ರೇಮ ಮೂಡಲಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಾಗರಾಜ್, ಪ್ರವೀಣ್ ಕುಮಾರ್, ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…