ಹುತಾತ್ಮ ವೀರಯೋಧನಿಗೆ ಗೌರವ ಸಮರ್ಪಣೆ : ಮೊಂಬತ್ತಿ ಬೆಳಗಿ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಿದ ಕನ್ನಡ ಪರ ಸಂಘಟನೆಗಳ ಒಕ್ಕೂಟ

ಹುತಾತ್ಮ ವೀರಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ರವರ ಭಾವಚಿತ್ರಕ್ಕೆ ಪುಷ್ಪನಮನ ಹಾಗೂ ಮೇಣದಬತ್ತಿ ಬೆಳಗುವ ಮೂಲಕ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಗೌರವ ನಮನ ಸಲ್ಲಿಸಲಾಯಿತು.

ಇತ್ತೀಚೆಗೆ ಜಮ್ಮು-ಕಾಶ್ಮೀರದಲ್ಲಿ ಉಗ್ರರೊಂದಿಗೆ ನಡೆದ ಕಾಳಗದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ರವರು ದೇಶದ ಹೆಮ್ಮೆಯ ವೀರ. ಇಂತಹ ವೀರಯೋಧರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ದೇಶದ ಶಾಂತಿಯನ್ನು ಕದಡುವ ಉಗ್ರರ ವಿರುದ್ಧದ ಹೋರಾಟದಲ್ಲಿ ತಮ್ಮ ಪ್ರಾಣತ್ಯಾಗ ಮಾಡಿರುವುದು ದೇಶಕ್ಕೆ ತುಂಬಲಾರದ ನಷ್ಟ, ಗಡಿಕಾಯುವ ನಮ್ಮ ದೇಶದ  ಯೋಧರ ಜೋತೆ ನಾವೆಲ್ಲರೂ ಇದ್ದೇವೆ ಎಂಬುದೆ ಈ ಗೌರವ ಸಮರ್ಪಣೆ, ಸರ್ಕಾರ ಈ ನಮ್ಮ ಯೋಧರ ಬಲಿದಾನಕ್ಕೆ ತಕ್ಕ ಉತ್ತರ ನೀಡಲಿ ಎಂದು ಕನ್ನಡ ಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ನಂಜಪ್ಪ ಭಾವುಕರಾದರು.

ಕನ್ನಡ ಪರ ಹೋರಾಟಗಾರ್ತಿ ಪ್ರಮೀಳಾ ಮಹದೇವ್ ಮಾತನಾಡಿ, ಸದಾ ದೇಶದ ರಕ್ಷಣೆಯಲ್ಲಿ ತೊಡಗಿರುವ ಯೋಧರು ನಮಗೆ ನಿಜವಾದ ನಾಯಕರು, ರಕ್ತಪಿಶಾಚಿ ಉಗ್ರರೊಂದಿಗೆ ಹೋರಾಡಿ ಹುತಾತ್ಮರಾಗಿರುವ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ರವರ ತ್ಯಾಗ ಯುವ ಪೀಳಿಗೆಗೆ ಮಾದರಿ. ದೇಶಕ್ಕಾಗಿ ಪ್ರಾಣವನ್ನು ಲೆಕ್ಕಿಸದೆ ಹೋರಾಟ ಮಾಡಿ  ದೇಶಕ್ಕಾಗಿ ಪ್ರಾಣತ್ಯಾಗ ಮಾಡಿ ಅಮರರಾದ ಅವರನ್ನು ಸ್ಮರಿಸಿ ಅವರ ದೇಶ ಪ್ರೇಮಕ್ಕೆ ನಮನ ಸಲ್ಲಿಸುವ ಮೂಲಕ    ಪ್ರತಿಯೊಬ್ಬ ಯುವಕರಲ್ಲಿ ದೇಶಪ್ರೇಮ ಮೂಡಲಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ  ನಾಗರಾಜ್, ಪ್ರವೀಣ್ ಕುಮಾರ್,  ಮತ್ತಿತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

4 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

15 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

16 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago