ಹುಲಿಕುಂಟೆಯಲ್ಲಿ ಹುಲಿಬೇಟೆ ವೀರಗಲ್ಲು ಪತ್ತೆ: ತಾಲೂಕಿನಲ್ಲಿ ಈವರೆಗೆ ನಾಲ್ಕು ಹುಲಿಬೇಟೆ ವೀರಗಲ್ಲು ಲಭ್ಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇತಿಹಾಸಕಾರ ಡಾ.ಎಸ್ ವೆಂಕಟೇಶ್ ಅವರು ಹೇಳುವಂತೆ ಹುಲಿಬೇಟೆಯ ವೀರಗಲ್ಲುಗಳು ದೊರೆತಿರುವುದು ತೀರಾ ಕಡಿಮೆ. ತೂಬಗೆರೆ ಹೋಬಳಿಯ ತಿಮ್ಮೋಜನಹಳ್ಳಿಯಲ್ಲಿ ಎರಡು ಮತ್ತು ಗೆದ್ದಲಪಾಳ್ಯದ ರಸ್ತೆಯಲ್ಲಿ ಒಂದು ಹುಲಿಬೇಟೆ ವೀರಗಲ್ಲುಗಳು ಲಭ್ಯವಾಗಿವೆ. ಈಗ ಇವುಗಳ ಜೊತೆಗೆ ದೊಡ್ಡಬೆಳವಂಗಲ ಹೋಬಳಿಯ ಹುಲಿಕುಂಟೆ ಗ್ರಾಮದಲ್ಲಿ ಹುಲಿಬೇಟೆಯ ವೀರಗಲ್ಲೊಂದು ಲಭ್ಯವಾಗಿದೆ. ಶಿಲ್ಪ ಲಕ್ಷಣದ ಆಧಾರದ ಮೇಲೆ ಇದನ್ನು 10ನೇ ಶತಮಾನಕ್ಕೆ ಸೇರಿಸಬಹುದು ಎನ್ನುತ್ತಾರೆ ವೆಂಕಟೇಶ್.

ವೀರನು ಆಲೀಢಭಂಗಿಯಲ್ಲಿ ನಿಂತಿದ್ದು, ತನ್ನ ಬಲಗೈಯಲ್ಲಿ ಖಡ್ಗವನ್ನು ಹಿಡಿದು ಮೇಲೆತ್ತಿರುವನು. ಎದುರುಗಡೆ ವೀರನತ್ತ ಮುನ್ನುಗ್ಗುತ್ತಿರುವ ಹುಲಿಯ ಚಿತ್ರಣವಿದೆ. ಈ ವೀರಗಲ್ಲಿನ ಮೇಲೆ ಯಾವುದೇ ರೀತಿಯ ಬರೆವಣಿಗೆ ಇಲ್ಲ. ಒಟ್ಟಾರೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈವರೆಗೆ ನಾಲ್ಕು ಹುಲಿಬೇಟೆ ವೀರಗಲ್ಲುಗಳು ಲಭ್ಯವಾದಂತಾಯಿತು.

ಮಾನವ ಮತ್ತು ಹುಲಿಗಳ ಸಂಘರ್ಷ ಇಂದು-ನಿನ್ನೆಯಿಂದಲ್ಲ ಇತಿಹಾಸ ಪೂರ್ವಕಾಲದಿಂದಲೂ ಮಾನವ ನಿರಂತರವಾಗಿ ಹುಲಿಗಳ ಜೊತೆಗೆ ಸಂಘರ್ಷ ಮಾಡಿಕೊಂಡು ಬಂದಿದ್ದಾನೆ. ಹೀಗೆ ಹುಲಿ ಜೊತೆ ಕಾದಾಡುವಾಗ ಮೃತಪಟ್ಟ ವೀರನ ಸ್ಮರಣಾರ್ಥ ನೆಟ್ಟಕಲ್ಲುಗಳೆ ಹುಲಿಬೇಟೆ ವೀರಗಲ್ಲುಗಳು. ಇಂತಹ ಸ್ಮಾರಕ ಶಿಲ್ಪಗಳಿಂದ ಹುಲಿಗಳ ವಾಸಸ್ಥಾನದ ಕುರಿತಂತೆ ಅಧ್ಯಯನ ಮಾಡುವುದಕ್ಕೆ ಸಾದ್ಯವಿದೆ.

ಬ್ರಿಟಿಷ್ ಆಡಳಿತದ ಅವಧಿಯವರೆಗೆ ಈ ಭಾಗದಲ್ಲಿ ಹುಲಿಗಳಿದ್ದ ಮಾಹಿತಿಯಿದೆ. ಆದರೆ ರಾಜ್ಯದ ಅರಣ್ಯ ಇಲಾಖೆಗಳ ದಾಖಲೆಗಳ ಪ್ರಕಾರ 1950 ರ ನಂತರ ಇಲ್ಲಿ ಹುಲಿಗಳಿದ್ದ ಯಾವುದೇ ಮಾಹಿತಿಯಿಲ್ಲ.

ಇದೇ ಡಿಸೆಂಬರ್ 26 ಕ್ಕೆ ಹುಲಿಕುಂಟೆಯ ಬೇಟೆರಂಗನಾಥಸ್ವಾಮಿಯ ಜಾತ್ರೆಯಿದೆ. ಕಾಕತಾಳೀಯವೆಂಬಂತೆ ಈಗಲೇ ಹುಲಿಬೇಟೆ ವೀರಗಲ್ಲು ಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.

ಕೆಲವರು ಈ ಹುಲಿಬೇಟೆಯ ವೀರಗಲ್ಲನ್ನು ಗ್ರಾಮನಾಮದೊಂದಿಗೆ ತಳುಕು ಹಾಕುತ್ತಿರುವುದು ವಿಶೇಷ.

Ramesh Babu

Journalist

Recent Posts

ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ……

ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ‌ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…

10 hours ago

ಆಕ್ಸಿಡೆಂಟ್ ಸ್ಪಾಟ್ ಆದ ಮೆಣಸಿ ಗೇಟ್: ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ: ಹಲವರಿಗೆ ಗಾಯ: ಆಸ್ಪತ್ರೆಗೆ ದಾಖಲು

ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…

21 hours ago

ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ: ಬೈಕ್ ಸವಾರರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…

1 day ago

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದ ಗೂಡ್ಸ್ ಆಟೋ: ಚಾಲಕನಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…

1 day ago

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ…..,

ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ‌ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…

1 day ago

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

2 days ago