ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇತಿಹಾಸಕಾರ ಡಾ.ಎಸ್ ವೆಂಕಟೇಶ್ ಅವರು ಹೇಳುವಂತೆ ಹುಲಿಬೇಟೆಯ ವೀರಗಲ್ಲುಗಳು ದೊರೆತಿರುವುದು ತೀರಾ ಕಡಿಮೆ. ತೂಬಗೆರೆ ಹೋಬಳಿಯ ತಿಮ್ಮೋಜನಹಳ್ಳಿಯಲ್ಲಿ ಎರಡು ಮತ್ತು ಗೆದ್ದಲಪಾಳ್ಯದ ರಸ್ತೆಯಲ್ಲಿ ಒಂದು ಹುಲಿಬೇಟೆ ವೀರಗಲ್ಲುಗಳು ಲಭ್ಯವಾಗಿವೆ. ಈಗ ಇವುಗಳ ಜೊತೆಗೆ ದೊಡ್ಡಬೆಳವಂಗಲ ಹೋಬಳಿಯ ಹುಲಿಕುಂಟೆ ಗ್ರಾಮದಲ್ಲಿ ಹುಲಿಬೇಟೆಯ ವೀರಗಲ್ಲೊಂದು ಲಭ್ಯವಾಗಿದೆ. ಶಿಲ್ಪ ಲಕ್ಷಣದ ಆಧಾರದ ಮೇಲೆ ಇದನ್ನು 10ನೇ ಶತಮಾನಕ್ಕೆ ಸೇರಿಸಬಹುದು ಎನ್ನುತ್ತಾರೆ ವೆಂಕಟೇಶ್.
ವೀರನು ಆಲೀಢಭಂಗಿಯಲ್ಲಿ ನಿಂತಿದ್ದು, ತನ್ನ ಬಲಗೈಯಲ್ಲಿ ಖಡ್ಗವನ್ನು ಹಿಡಿದು ಮೇಲೆತ್ತಿರುವನು. ಎದುರುಗಡೆ ವೀರನತ್ತ ಮುನ್ನುಗ್ಗುತ್ತಿರುವ ಹುಲಿಯ ಚಿತ್ರಣವಿದೆ. ಈ ವೀರಗಲ್ಲಿನ ಮೇಲೆ ಯಾವುದೇ ರೀತಿಯ ಬರೆವಣಿಗೆ ಇಲ್ಲ. ಒಟ್ಟಾರೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈವರೆಗೆ ನಾಲ್ಕು ಹುಲಿಬೇಟೆ ವೀರಗಲ್ಲುಗಳು ಲಭ್ಯವಾದಂತಾಯಿತು.
ಬ್ರಿಟಿಷ್ ಆಡಳಿತದ ಅವಧಿಯವರೆಗೆ ಈ ಭಾಗದಲ್ಲಿ ಹುಲಿಗಳಿದ್ದ ಮಾಹಿತಿಯಿದೆ. ಆದರೆ ರಾಜ್ಯದ ಅರಣ್ಯ ಇಲಾಖೆಗಳ ದಾಖಲೆಗಳ ಪ್ರಕಾರ 1950 ರ ನಂತರ ಇಲ್ಲಿ ಹುಲಿಗಳಿದ್ದ ಯಾವುದೇ ಮಾಹಿತಿಯಿಲ್ಲ.
ಇದೇ ಡಿಸೆಂಬರ್ 26 ಕ್ಕೆ ಹುಲಿಕುಂಟೆಯ ಬೇಟೆರಂಗನಾಥಸ್ವಾಮಿಯ ಜಾತ್ರೆಯಿದೆ. ಕಾಕತಾಳೀಯವೆಂಬಂತೆ ಈಗಲೇ ಹುಲಿಬೇಟೆ ವೀರಗಲ್ಲು ಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.
ಕೆಲವರು ಈ ಹುಲಿಬೇಟೆಯ ವೀರಗಲ್ಲನ್ನು ಗ್ರಾಮನಾಮದೊಂದಿಗೆ ತಳುಕು ಹಾಕುತ್ತಿರುವುದು ವಿಶೇಷ.
ಬಾಂಗ್ಲಾ......... ಒಂದು ಎಚ್ಚರಿಕೆಯ ಪಾಠ......... ಬಾಂಗ್ಲಾದೇಶದ ಅಮಾನವೀಯವಾದ ಹಿಂದೂ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಖಂಡಿಸುತ್ತಾ, ನಮ್ಮ ಜವಾಬ್ದಾರಿ ನೆನಪಿಸುತ್ತಾ...... ಬಾಂಗ್ಲಾದೇಶದಲ್ಲಿ…
ಜೆಸಿಬಿ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಹಲವರಿಗೆ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮೆಣಸಿ ಗೇಟ್ ಬಳಿ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವತಿಯಿಂದ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಸಂಚಾರ ಸುರಕ್ಷತಾ ಸಪ್ತಾಹ-2025ರ ಅಡಿಯಲ್ಲಿ ವಾಹನ (ಬೈಕ್) ಸವಾರರಿಗೆ ಹೆಲ್ಮೆಟ್…
ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ಹಳ್ಳಕ್ಕೆ ಉರುಳಿಬಿದ್ದಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಹೊನ್ನಾವರ ಗೇಟ್ ಸಮೀಪ…
ಸೃಷ್ಟಿಯ ಸಹಜತೆ ಮತ್ತು ವಿಸ್ಮಯ....., ಅಲೆಗ್ಸಾಂಡರ್ ದಿ ಗ್ರೇಟ್ ವಿಶ್ವ ಗೆಲ್ಲುವ ಕನಸಿನ ಚಕ್ರವರ್ತಿ ರೋಗಕ್ಕೆ ಬಲಿಯಾದ.... ಶಾಂತಿ ದೂತ,…
ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…