ಹುಲಿಕುಂಟೆಯಲ್ಲಿ ಹುಲಿಬೇಟೆ ವೀರಗಲ್ಲು ಪತ್ತೆ: ತಾಲೂಕಿನಲ್ಲಿ ಈವರೆಗೆ ನಾಲ್ಕು ಹುಲಿಬೇಟೆ ವೀರಗಲ್ಲು ಲಭ್ಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇತಿಹಾಸಕಾರ ಡಾ.ಎಸ್ ವೆಂಕಟೇಶ್ ಅವರು ಹೇಳುವಂತೆ ಹುಲಿಬೇಟೆಯ ವೀರಗಲ್ಲುಗಳು ದೊರೆತಿರುವುದು ತೀರಾ ಕಡಿಮೆ. ತೂಬಗೆರೆ ಹೋಬಳಿಯ ತಿಮ್ಮೋಜನಹಳ್ಳಿಯಲ್ಲಿ ಎರಡು ಮತ್ತು ಗೆದ್ದಲಪಾಳ್ಯದ ರಸ್ತೆಯಲ್ಲಿ ಒಂದು ಹುಲಿಬೇಟೆ ವೀರಗಲ್ಲುಗಳು ಲಭ್ಯವಾಗಿವೆ. ಈಗ ಇವುಗಳ ಜೊತೆಗೆ ದೊಡ್ಡಬೆಳವಂಗಲ ಹೋಬಳಿಯ ಹುಲಿಕುಂಟೆ ಗ್ರಾಮದಲ್ಲಿ ಹುಲಿಬೇಟೆಯ ವೀರಗಲ್ಲೊಂದು ಲಭ್ಯವಾಗಿದೆ. ಶಿಲ್ಪ ಲಕ್ಷಣದ ಆಧಾರದ ಮೇಲೆ ಇದನ್ನು 10ನೇ ಶತಮಾನಕ್ಕೆ ಸೇರಿಸಬಹುದು ಎನ್ನುತ್ತಾರೆ ವೆಂಕಟೇಶ್.

ವೀರನು ಆಲೀಢಭಂಗಿಯಲ್ಲಿ ನಿಂತಿದ್ದು, ತನ್ನ ಬಲಗೈಯಲ್ಲಿ ಖಡ್ಗವನ್ನು ಹಿಡಿದು ಮೇಲೆತ್ತಿರುವನು. ಎದುರುಗಡೆ ವೀರನತ್ತ ಮುನ್ನುಗ್ಗುತ್ತಿರುವ ಹುಲಿಯ ಚಿತ್ರಣವಿದೆ. ಈ ವೀರಗಲ್ಲಿನ ಮೇಲೆ ಯಾವುದೇ ರೀತಿಯ ಬರೆವಣಿಗೆ ಇಲ್ಲ. ಒಟ್ಟಾರೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈವರೆಗೆ ನಾಲ್ಕು ಹುಲಿಬೇಟೆ ವೀರಗಲ್ಲುಗಳು ಲಭ್ಯವಾದಂತಾಯಿತು.

ಮಾನವ ಮತ್ತು ಹುಲಿಗಳ ಸಂಘರ್ಷ ಇಂದು-ನಿನ್ನೆಯಿಂದಲ್ಲ ಇತಿಹಾಸ ಪೂರ್ವಕಾಲದಿಂದಲೂ ಮಾನವ ನಿರಂತರವಾಗಿ ಹುಲಿಗಳ ಜೊತೆಗೆ ಸಂಘರ್ಷ ಮಾಡಿಕೊಂಡು ಬಂದಿದ್ದಾನೆ. ಹೀಗೆ ಹುಲಿ ಜೊತೆ ಕಾದಾಡುವಾಗ ಮೃತಪಟ್ಟ ವೀರನ ಸ್ಮರಣಾರ್ಥ ನೆಟ್ಟಕಲ್ಲುಗಳೆ ಹುಲಿಬೇಟೆ ವೀರಗಲ್ಲುಗಳು. ಇಂತಹ ಸ್ಮಾರಕ ಶಿಲ್ಪಗಳಿಂದ ಹುಲಿಗಳ ವಾಸಸ್ಥಾನದ ಕುರಿತಂತೆ ಅಧ್ಯಯನ ಮಾಡುವುದಕ್ಕೆ ಸಾದ್ಯವಿದೆ.

ಬ್ರಿಟಿಷ್ ಆಡಳಿತದ ಅವಧಿಯವರೆಗೆ ಈ ಭಾಗದಲ್ಲಿ ಹುಲಿಗಳಿದ್ದ ಮಾಹಿತಿಯಿದೆ. ಆದರೆ ರಾಜ್ಯದ ಅರಣ್ಯ ಇಲಾಖೆಗಳ ದಾಖಲೆಗಳ ಪ್ರಕಾರ 1950 ರ ನಂತರ ಇಲ್ಲಿ ಹುಲಿಗಳಿದ್ದ ಯಾವುದೇ ಮಾಹಿತಿಯಿಲ್ಲ.

ಇದೇ ಡಿಸೆಂಬರ್ 26 ಕ್ಕೆ ಹುಲಿಕುಂಟೆಯ ಬೇಟೆರಂಗನಾಥಸ್ವಾಮಿಯ ಜಾತ್ರೆಯಿದೆ. ಕಾಕತಾಳೀಯವೆಂಬಂತೆ ಈಗಲೇ ಹುಲಿಬೇಟೆ ವೀರಗಲ್ಲು ಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.

ಕೆಲವರು ಈ ಹುಲಿಬೇಟೆಯ ವೀರಗಲ್ಲನ್ನು ಗ್ರಾಮನಾಮದೊಂದಿಗೆ ತಳುಕು ಹಾಕುತ್ತಿರುವುದು ವಿಶೇಷ.

Ramesh Babu

Journalist

Recent Posts

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…

24 minutes ago

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

12 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

13 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

13 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

16 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

23 hours ago