ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇತಿಹಾಸಕಾರ ಡಾ.ಎಸ್ ವೆಂಕಟೇಶ್ ಅವರು ಹೇಳುವಂತೆ ಹುಲಿಬೇಟೆಯ ವೀರಗಲ್ಲುಗಳು ದೊರೆತಿರುವುದು ತೀರಾ ಕಡಿಮೆ. ತೂಬಗೆರೆ ಹೋಬಳಿಯ ತಿಮ್ಮೋಜನಹಳ್ಳಿಯಲ್ಲಿ ಎರಡು ಮತ್ತು ಗೆದ್ದಲಪಾಳ್ಯದ ರಸ್ತೆಯಲ್ಲಿ ಒಂದು ಹುಲಿಬೇಟೆ ವೀರಗಲ್ಲುಗಳು ಲಭ್ಯವಾಗಿವೆ. ಈಗ ಇವುಗಳ ಜೊತೆಗೆ ದೊಡ್ಡಬೆಳವಂಗಲ ಹೋಬಳಿಯ ಹುಲಿಕುಂಟೆ ಗ್ರಾಮದಲ್ಲಿ ಹುಲಿಬೇಟೆಯ ವೀರಗಲ್ಲೊಂದು ಲಭ್ಯವಾಗಿದೆ. ಶಿಲ್ಪ ಲಕ್ಷಣದ ಆಧಾರದ ಮೇಲೆ ಇದನ್ನು 10ನೇ ಶತಮಾನಕ್ಕೆ ಸೇರಿಸಬಹುದು ಎನ್ನುತ್ತಾರೆ ವೆಂಕಟೇಶ್.
ವೀರನು ಆಲೀಢಭಂಗಿಯಲ್ಲಿ ನಿಂತಿದ್ದು, ತನ್ನ ಬಲಗೈಯಲ್ಲಿ ಖಡ್ಗವನ್ನು ಹಿಡಿದು ಮೇಲೆತ್ತಿರುವನು. ಎದುರುಗಡೆ ವೀರನತ್ತ ಮುನ್ನುಗ್ಗುತ್ತಿರುವ ಹುಲಿಯ ಚಿತ್ರಣವಿದೆ. ಈ ವೀರಗಲ್ಲಿನ ಮೇಲೆ ಯಾವುದೇ ರೀತಿಯ ಬರೆವಣಿಗೆ ಇಲ್ಲ. ಒಟ್ಟಾರೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈವರೆಗೆ ನಾಲ್ಕು ಹುಲಿಬೇಟೆ ವೀರಗಲ್ಲುಗಳು ಲಭ್ಯವಾದಂತಾಯಿತು.
ಬ್ರಿಟಿಷ್ ಆಡಳಿತದ ಅವಧಿಯವರೆಗೆ ಈ ಭಾಗದಲ್ಲಿ ಹುಲಿಗಳಿದ್ದ ಮಾಹಿತಿಯಿದೆ. ಆದರೆ ರಾಜ್ಯದ ಅರಣ್ಯ ಇಲಾಖೆಗಳ ದಾಖಲೆಗಳ ಪ್ರಕಾರ 1950 ರ ನಂತರ ಇಲ್ಲಿ ಹುಲಿಗಳಿದ್ದ ಯಾವುದೇ ಮಾಹಿತಿಯಿಲ್ಲ.
ಇದೇ ಡಿಸೆಂಬರ್ 26 ಕ್ಕೆ ಹುಲಿಕುಂಟೆಯ ಬೇಟೆರಂಗನಾಥಸ್ವಾಮಿಯ ಜಾತ್ರೆಯಿದೆ. ಕಾಕತಾಳೀಯವೆಂಬಂತೆ ಈಗಲೇ ಹುಲಿಬೇಟೆ ವೀರಗಲ್ಲು ಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.
ಕೆಲವರು ಈ ಹುಲಿಬೇಟೆಯ ವೀರಗಲ್ಲನ್ನು ಗ್ರಾಮನಾಮದೊಂದಿಗೆ ತಳುಕು ಹಾಕುತ್ತಿರುವುದು ವಿಶೇಷ.
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…