ಹುಲಿಕುಂಟೆಯಲ್ಲಿ ಹುಲಿಬೇಟೆ ವೀರಗಲ್ಲು ಪತ್ತೆ: ತಾಲೂಕಿನಲ್ಲಿ ಈವರೆಗೆ ನಾಲ್ಕು ಹುಲಿಬೇಟೆ ವೀರಗಲ್ಲು ಲಭ್ಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇತಿಹಾಸಕಾರ ಡಾ.ಎಸ್ ವೆಂಕಟೇಶ್ ಅವರು ಹೇಳುವಂತೆ ಹುಲಿಬೇಟೆಯ ವೀರಗಲ್ಲುಗಳು ದೊರೆತಿರುವುದು ತೀರಾ ಕಡಿಮೆ. ತೂಬಗೆರೆ ಹೋಬಳಿಯ ತಿಮ್ಮೋಜನಹಳ್ಳಿಯಲ್ಲಿ ಎರಡು ಮತ್ತು ಗೆದ್ದಲಪಾಳ್ಯದ ರಸ್ತೆಯಲ್ಲಿ ಒಂದು ಹುಲಿಬೇಟೆ ವೀರಗಲ್ಲುಗಳು ಲಭ್ಯವಾಗಿವೆ. ಈಗ ಇವುಗಳ ಜೊತೆಗೆ ದೊಡ್ಡಬೆಳವಂಗಲ ಹೋಬಳಿಯ ಹುಲಿಕುಂಟೆ ಗ್ರಾಮದಲ್ಲಿ ಹುಲಿಬೇಟೆಯ ವೀರಗಲ್ಲೊಂದು ಲಭ್ಯವಾಗಿದೆ. ಶಿಲ್ಪ ಲಕ್ಷಣದ ಆಧಾರದ ಮೇಲೆ ಇದನ್ನು 10ನೇ ಶತಮಾನಕ್ಕೆ ಸೇರಿಸಬಹುದು ಎನ್ನುತ್ತಾರೆ ವೆಂಕಟೇಶ್.

ವೀರನು ಆಲೀಢಭಂಗಿಯಲ್ಲಿ ನಿಂತಿದ್ದು, ತನ್ನ ಬಲಗೈಯಲ್ಲಿ ಖಡ್ಗವನ್ನು ಹಿಡಿದು ಮೇಲೆತ್ತಿರುವನು. ಎದುರುಗಡೆ ವೀರನತ್ತ ಮುನ್ನುಗ್ಗುತ್ತಿರುವ ಹುಲಿಯ ಚಿತ್ರಣವಿದೆ. ಈ ವೀರಗಲ್ಲಿನ ಮೇಲೆ ಯಾವುದೇ ರೀತಿಯ ಬರೆವಣಿಗೆ ಇಲ್ಲ. ಒಟ್ಟಾರೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈವರೆಗೆ ನಾಲ್ಕು ಹುಲಿಬೇಟೆ ವೀರಗಲ್ಲುಗಳು ಲಭ್ಯವಾದಂತಾಯಿತು.

ಮಾನವ ಮತ್ತು ಹುಲಿಗಳ ಸಂಘರ್ಷ ಇಂದು-ನಿನ್ನೆಯಿಂದಲ್ಲ ಇತಿಹಾಸ ಪೂರ್ವಕಾಲದಿಂದಲೂ ಮಾನವ ನಿರಂತರವಾಗಿ ಹುಲಿಗಳ ಜೊತೆಗೆ ಸಂಘರ್ಷ ಮಾಡಿಕೊಂಡು ಬಂದಿದ್ದಾನೆ. ಹೀಗೆ ಹುಲಿ ಜೊತೆ ಕಾದಾಡುವಾಗ ಮೃತಪಟ್ಟ ವೀರನ ಸ್ಮರಣಾರ್ಥ ನೆಟ್ಟಕಲ್ಲುಗಳೆ ಹುಲಿಬೇಟೆ ವೀರಗಲ್ಲುಗಳು. ಇಂತಹ ಸ್ಮಾರಕ ಶಿಲ್ಪಗಳಿಂದ ಹುಲಿಗಳ ವಾಸಸ್ಥಾನದ ಕುರಿತಂತೆ ಅಧ್ಯಯನ ಮಾಡುವುದಕ್ಕೆ ಸಾದ್ಯವಿದೆ.

ಬ್ರಿಟಿಷ್ ಆಡಳಿತದ ಅವಧಿಯವರೆಗೆ ಈ ಭಾಗದಲ್ಲಿ ಹುಲಿಗಳಿದ್ದ ಮಾಹಿತಿಯಿದೆ. ಆದರೆ ರಾಜ್ಯದ ಅರಣ್ಯ ಇಲಾಖೆಗಳ ದಾಖಲೆಗಳ ಪ್ರಕಾರ 1950 ರ ನಂತರ ಇಲ್ಲಿ ಹುಲಿಗಳಿದ್ದ ಯಾವುದೇ ಮಾಹಿತಿಯಿಲ್ಲ.

ಇದೇ ಡಿಸೆಂಬರ್ 26 ಕ್ಕೆ ಹುಲಿಕುಂಟೆಯ ಬೇಟೆರಂಗನಾಥಸ್ವಾಮಿಯ ಜಾತ್ರೆಯಿದೆ. ಕಾಕತಾಳೀಯವೆಂಬಂತೆ ಈಗಲೇ ಹುಲಿಬೇಟೆ ವೀರಗಲ್ಲು ಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.

ಕೆಲವರು ಈ ಹುಲಿಬೇಟೆಯ ವೀರಗಲ್ಲನ್ನು ಗ್ರಾಮನಾಮದೊಂದಿಗೆ ತಳುಕು ಹಾಕುತ್ತಿರುವುದು ವಿಶೇಷ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

13 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

1 day ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

2 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

3 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

3 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago