ಹುಲಿಕುಂಟೆಯಲ್ಲಿ ಹುಲಿಬೇಟೆ ವೀರಗಲ್ಲು ಪತ್ತೆ: ತಾಲೂಕಿನಲ್ಲಿ ಈವರೆಗೆ ನಾಲ್ಕು ಹುಲಿಬೇಟೆ ವೀರಗಲ್ಲು ಲಭ್ಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇತಿಹಾಸಕಾರ ಡಾ.ಎಸ್ ವೆಂಕಟೇಶ್ ಅವರು ಹೇಳುವಂತೆ ಹುಲಿಬೇಟೆಯ ವೀರಗಲ್ಲುಗಳು ದೊರೆತಿರುವುದು ತೀರಾ ಕಡಿಮೆ. ತೂಬಗೆರೆ ಹೋಬಳಿಯ ತಿಮ್ಮೋಜನಹಳ್ಳಿಯಲ್ಲಿ ಎರಡು ಮತ್ತು ಗೆದ್ದಲಪಾಳ್ಯದ ರಸ್ತೆಯಲ್ಲಿ ಒಂದು ಹುಲಿಬೇಟೆ ವೀರಗಲ್ಲುಗಳು ಲಭ್ಯವಾಗಿವೆ. ಈಗ ಇವುಗಳ ಜೊತೆಗೆ ದೊಡ್ಡಬೆಳವಂಗಲ ಹೋಬಳಿಯ ಹುಲಿಕುಂಟೆ ಗ್ರಾಮದಲ್ಲಿ ಹುಲಿಬೇಟೆಯ ವೀರಗಲ್ಲೊಂದು ಲಭ್ಯವಾಗಿದೆ. ಶಿಲ್ಪ ಲಕ್ಷಣದ ಆಧಾರದ ಮೇಲೆ ಇದನ್ನು 10ನೇ ಶತಮಾನಕ್ಕೆ ಸೇರಿಸಬಹುದು ಎನ್ನುತ್ತಾರೆ ವೆಂಕಟೇಶ್.

ವೀರನು ಆಲೀಢಭಂಗಿಯಲ್ಲಿ ನಿಂತಿದ್ದು, ತನ್ನ ಬಲಗೈಯಲ್ಲಿ ಖಡ್ಗವನ್ನು ಹಿಡಿದು ಮೇಲೆತ್ತಿರುವನು. ಎದುರುಗಡೆ ವೀರನತ್ತ ಮುನ್ನುಗ್ಗುತ್ತಿರುವ ಹುಲಿಯ ಚಿತ್ರಣವಿದೆ. ಈ ವೀರಗಲ್ಲಿನ ಮೇಲೆ ಯಾವುದೇ ರೀತಿಯ ಬರೆವಣಿಗೆ ಇಲ್ಲ. ಒಟ್ಟಾರೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈವರೆಗೆ ನಾಲ್ಕು ಹುಲಿಬೇಟೆ ವೀರಗಲ್ಲುಗಳು ಲಭ್ಯವಾದಂತಾಯಿತು.

ಮಾನವ ಮತ್ತು ಹುಲಿಗಳ ಸಂಘರ್ಷ ಇಂದು-ನಿನ್ನೆಯಿಂದಲ್ಲ ಇತಿಹಾಸ ಪೂರ್ವಕಾಲದಿಂದಲೂ ಮಾನವ ನಿರಂತರವಾಗಿ ಹುಲಿಗಳ ಜೊತೆಗೆ ಸಂಘರ್ಷ ಮಾಡಿಕೊಂಡು ಬಂದಿದ್ದಾನೆ. ಹೀಗೆ ಹುಲಿ ಜೊತೆ ಕಾದಾಡುವಾಗ ಮೃತಪಟ್ಟ ವೀರನ ಸ್ಮರಣಾರ್ಥ ನೆಟ್ಟಕಲ್ಲುಗಳೆ ಹುಲಿಬೇಟೆ ವೀರಗಲ್ಲುಗಳು. ಇಂತಹ ಸ್ಮಾರಕ ಶಿಲ್ಪಗಳಿಂದ ಹುಲಿಗಳ ವಾಸಸ್ಥಾನದ ಕುರಿತಂತೆ ಅಧ್ಯಯನ ಮಾಡುವುದಕ್ಕೆ ಸಾದ್ಯವಿದೆ.

ಬ್ರಿಟಿಷ್ ಆಡಳಿತದ ಅವಧಿಯವರೆಗೆ ಈ ಭಾಗದಲ್ಲಿ ಹುಲಿಗಳಿದ್ದ ಮಾಹಿತಿಯಿದೆ. ಆದರೆ ರಾಜ್ಯದ ಅರಣ್ಯ ಇಲಾಖೆಗಳ ದಾಖಲೆಗಳ ಪ್ರಕಾರ 1950 ರ ನಂತರ ಇಲ್ಲಿ ಹುಲಿಗಳಿದ್ದ ಯಾವುದೇ ಮಾಹಿತಿಯಿಲ್ಲ.

ಇದೇ ಡಿಸೆಂಬರ್ 26 ಕ್ಕೆ ಹುಲಿಕುಂಟೆಯ ಬೇಟೆರಂಗನಾಥಸ್ವಾಮಿಯ ಜಾತ್ರೆಯಿದೆ. ಕಾಕತಾಳೀಯವೆಂಬಂತೆ ಈಗಲೇ ಹುಲಿಬೇಟೆ ವೀರಗಲ್ಲು ಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.

ಕೆಲವರು ಈ ಹುಲಿಬೇಟೆಯ ವೀರಗಲ್ಲನ್ನು ಗ್ರಾಮನಾಮದೊಂದಿಗೆ ತಳುಕು ಹಾಕುತ್ತಿರುವುದು ವಿಶೇಷ.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

16 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

17 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

17 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

17 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

20 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

23 hours ago