ಹುಲಿಕುಂಟೆಯಲ್ಲಿ ಹುಲಿಬೇಟೆ ವೀರಗಲ್ಲು ಪತ್ತೆ: ತಾಲೂಕಿನಲ್ಲಿ ಈವರೆಗೆ ನಾಲ್ಕು ಹುಲಿಬೇಟೆ ವೀರಗಲ್ಲು ಲಭ್ಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇತಿಹಾಸಕಾರ ಡಾ.ಎಸ್ ವೆಂಕಟೇಶ್ ಅವರು ಹೇಳುವಂತೆ ಹುಲಿಬೇಟೆಯ ವೀರಗಲ್ಲುಗಳು ದೊರೆತಿರುವುದು ತೀರಾ ಕಡಿಮೆ. ತೂಬಗೆರೆ ಹೋಬಳಿಯ ತಿಮ್ಮೋಜನಹಳ್ಳಿಯಲ್ಲಿ ಎರಡು ಮತ್ತು ಗೆದ್ದಲಪಾಳ್ಯದ ರಸ್ತೆಯಲ್ಲಿ ಒಂದು ಹುಲಿಬೇಟೆ ವೀರಗಲ್ಲುಗಳು ಲಭ್ಯವಾಗಿವೆ. ಈಗ ಇವುಗಳ ಜೊತೆಗೆ ದೊಡ್ಡಬೆಳವಂಗಲ ಹೋಬಳಿಯ ಹುಲಿಕುಂಟೆ ಗ್ರಾಮದಲ್ಲಿ ಹುಲಿಬೇಟೆಯ ವೀರಗಲ್ಲೊಂದು ಲಭ್ಯವಾಗಿದೆ. ಶಿಲ್ಪ ಲಕ್ಷಣದ ಆಧಾರದ ಮೇಲೆ ಇದನ್ನು 10ನೇ ಶತಮಾನಕ್ಕೆ ಸೇರಿಸಬಹುದು ಎನ್ನುತ್ತಾರೆ ವೆಂಕಟೇಶ್.

ವೀರನು ಆಲೀಢಭಂಗಿಯಲ್ಲಿ ನಿಂತಿದ್ದು, ತನ್ನ ಬಲಗೈಯಲ್ಲಿ ಖಡ್ಗವನ್ನು ಹಿಡಿದು ಮೇಲೆತ್ತಿರುವನು. ಎದುರುಗಡೆ ವೀರನತ್ತ ಮುನ್ನುಗ್ಗುತ್ತಿರುವ ಹುಲಿಯ ಚಿತ್ರಣವಿದೆ. ಈ ವೀರಗಲ್ಲಿನ ಮೇಲೆ ಯಾವುದೇ ರೀತಿಯ ಬರೆವಣಿಗೆ ಇಲ್ಲ. ಒಟ್ಟಾರೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈವರೆಗೆ ನಾಲ್ಕು ಹುಲಿಬೇಟೆ ವೀರಗಲ್ಲುಗಳು ಲಭ್ಯವಾದಂತಾಯಿತು.

ಮಾನವ ಮತ್ತು ಹುಲಿಗಳ ಸಂಘರ್ಷ ಇಂದು-ನಿನ್ನೆಯಿಂದಲ್ಲ ಇತಿಹಾಸ ಪೂರ್ವಕಾಲದಿಂದಲೂ ಮಾನವ ನಿರಂತರವಾಗಿ ಹುಲಿಗಳ ಜೊತೆಗೆ ಸಂಘರ್ಷ ಮಾಡಿಕೊಂಡು ಬಂದಿದ್ದಾನೆ. ಹೀಗೆ ಹುಲಿ ಜೊತೆ ಕಾದಾಡುವಾಗ ಮೃತಪಟ್ಟ ವೀರನ ಸ್ಮರಣಾರ್ಥ ನೆಟ್ಟಕಲ್ಲುಗಳೆ ಹುಲಿಬೇಟೆ ವೀರಗಲ್ಲುಗಳು. ಇಂತಹ ಸ್ಮಾರಕ ಶಿಲ್ಪಗಳಿಂದ ಹುಲಿಗಳ ವಾಸಸ್ಥಾನದ ಕುರಿತಂತೆ ಅಧ್ಯಯನ ಮಾಡುವುದಕ್ಕೆ ಸಾದ್ಯವಿದೆ.

ಬ್ರಿಟಿಷ್ ಆಡಳಿತದ ಅವಧಿಯವರೆಗೆ ಈ ಭಾಗದಲ್ಲಿ ಹುಲಿಗಳಿದ್ದ ಮಾಹಿತಿಯಿದೆ. ಆದರೆ ರಾಜ್ಯದ ಅರಣ್ಯ ಇಲಾಖೆಗಳ ದಾಖಲೆಗಳ ಪ್ರಕಾರ 1950 ರ ನಂತರ ಇಲ್ಲಿ ಹುಲಿಗಳಿದ್ದ ಯಾವುದೇ ಮಾಹಿತಿಯಿಲ್ಲ.

ಇದೇ ಡಿಸೆಂಬರ್ 26 ಕ್ಕೆ ಹುಲಿಕುಂಟೆಯ ಬೇಟೆರಂಗನಾಥಸ್ವಾಮಿಯ ಜಾತ್ರೆಯಿದೆ. ಕಾಕತಾಳೀಯವೆಂಬಂತೆ ಈಗಲೇ ಹುಲಿಬೇಟೆ ವೀರಗಲ್ಲು ಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.

ಕೆಲವರು ಈ ಹುಲಿಬೇಟೆಯ ವೀರಗಲ್ಲನ್ನು ಗ್ರಾಮನಾಮದೊಂದಿಗೆ ತಳುಕು ಹಾಕುತ್ತಿರುವುದು ವಿಶೇಷ.

Ramesh Babu

Journalist

Recent Posts

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

12 hours ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

13 hours ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

19 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

1 day ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

2 days ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

2 days ago