ಹುಲಿಕುಂಟೆಯಲ್ಲಿ ಹುಲಿಬೇಟೆ ವೀರಗಲ್ಲು ಪತ್ತೆ: ತಾಲೂಕಿನಲ್ಲಿ ಈವರೆಗೆ ನಾಲ್ಕು ಹುಲಿಬೇಟೆ ವೀರಗಲ್ಲು ಲಭ್ಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇತಿಹಾಸಕಾರ ಡಾ.ಎಸ್ ವೆಂಕಟೇಶ್ ಅವರು ಹೇಳುವಂತೆ ಹುಲಿಬೇಟೆಯ ವೀರಗಲ್ಲುಗಳು ದೊರೆತಿರುವುದು ತೀರಾ ಕಡಿಮೆ. ತೂಬಗೆರೆ ಹೋಬಳಿಯ ತಿಮ್ಮೋಜನಹಳ್ಳಿಯಲ್ಲಿ ಎರಡು ಮತ್ತು ಗೆದ್ದಲಪಾಳ್ಯದ ರಸ್ತೆಯಲ್ಲಿ ಒಂದು ಹುಲಿಬೇಟೆ ವೀರಗಲ್ಲುಗಳು ಲಭ್ಯವಾಗಿವೆ. ಈಗ ಇವುಗಳ ಜೊತೆಗೆ ದೊಡ್ಡಬೆಳವಂಗಲ ಹೋಬಳಿಯ ಹುಲಿಕುಂಟೆ ಗ್ರಾಮದಲ್ಲಿ ಹುಲಿಬೇಟೆಯ ವೀರಗಲ್ಲೊಂದು ಲಭ್ಯವಾಗಿದೆ. ಶಿಲ್ಪ ಲಕ್ಷಣದ ಆಧಾರದ ಮೇಲೆ ಇದನ್ನು 10ನೇ ಶತಮಾನಕ್ಕೆ ಸೇರಿಸಬಹುದು ಎನ್ನುತ್ತಾರೆ ವೆಂಕಟೇಶ್.

ವೀರನು ಆಲೀಢಭಂಗಿಯಲ್ಲಿ ನಿಂತಿದ್ದು, ತನ್ನ ಬಲಗೈಯಲ್ಲಿ ಖಡ್ಗವನ್ನು ಹಿಡಿದು ಮೇಲೆತ್ತಿರುವನು. ಎದುರುಗಡೆ ವೀರನತ್ತ ಮುನ್ನುಗ್ಗುತ್ತಿರುವ ಹುಲಿಯ ಚಿತ್ರಣವಿದೆ. ಈ ವೀರಗಲ್ಲಿನ ಮೇಲೆ ಯಾವುದೇ ರೀತಿಯ ಬರೆವಣಿಗೆ ಇಲ್ಲ. ಒಟ್ಟಾರೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈವರೆಗೆ ನಾಲ್ಕು ಹುಲಿಬೇಟೆ ವೀರಗಲ್ಲುಗಳು ಲಭ್ಯವಾದಂತಾಯಿತು.

ಮಾನವ ಮತ್ತು ಹುಲಿಗಳ ಸಂಘರ್ಷ ಇಂದು-ನಿನ್ನೆಯಿಂದಲ್ಲ ಇತಿಹಾಸ ಪೂರ್ವಕಾಲದಿಂದಲೂ ಮಾನವ ನಿರಂತರವಾಗಿ ಹುಲಿಗಳ ಜೊತೆಗೆ ಸಂಘರ್ಷ ಮಾಡಿಕೊಂಡು ಬಂದಿದ್ದಾನೆ. ಹೀಗೆ ಹುಲಿ ಜೊತೆ ಕಾದಾಡುವಾಗ ಮೃತಪಟ್ಟ ವೀರನ ಸ್ಮರಣಾರ್ಥ ನೆಟ್ಟಕಲ್ಲುಗಳೆ ಹುಲಿಬೇಟೆ ವೀರಗಲ್ಲುಗಳು. ಇಂತಹ ಸ್ಮಾರಕ ಶಿಲ್ಪಗಳಿಂದ ಹುಲಿಗಳ ವಾಸಸ್ಥಾನದ ಕುರಿತಂತೆ ಅಧ್ಯಯನ ಮಾಡುವುದಕ್ಕೆ ಸಾದ್ಯವಿದೆ.

ಬ್ರಿಟಿಷ್ ಆಡಳಿತದ ಅವಧಿಯವರೆಗೆ ಈ ಭಾಗದಲ್ಲಿ ಹುಲಿಗಳಿದ್ದ ಮಾಹಿತಿಯಿದೆ. ಆದರೆ ರಾಜ್ಯದ ಅರಣ್ಯ ಇಲಾಖೆಗಳ ದಾಖಲೆಗಳ ಪ್ರಕಾರ 1950 ರ ನಂತರ ಇಲ್ಲಿ ಹುಲಿಗಳಿದ್ದ ಯಾವುದೇ ಮಾಹಿತಿಯಿಲ್ಲ.

ಇದೇ ಡಿಸೆಂಬರ್ 26 ಕ್ಕೆ ಹುಲಿಕುಂಟೆಯ ಬೇಟೆರಂಗನಾಥಸ್ವಾಮಿಯ ಜಾತ್ರೆಯಿದೆ. ಕಾಕತಾಳೀಯವೆಂಬಂತೆ ಈಗಲೇ ಹುಲಿಬೇಟೆ ವೀರಗಲ್ಲು ಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.

ಕೆಲವರು ಈ ಹುಲಿಬೇಟೆಯ ವೀರಗಲ್ಲನ್ನು ಗ್ರಾಮನಾಮದೊಂದಿಗೆ ತಳುಕು ಹಾಕುತ್ತಿರುವುದು ವಿಶೇಷ.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

2 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

15 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

17 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

17 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

18 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

22 hours ago