ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇತಿಹಾಸಕಾರ ಡಾ.ಎಸ್ ವೆಂಕಟೇಶ್ ಅವರು ಹೇಳುವಂತೆ ಹುಲಿಬೇಟೆಯ ವೀರಗಲ್ಲುಗಳು ದೊರೆತಿರುವುದು ತೀರಾ ಕಡಿಮೆ. ತೂಬಗೆರೆ ಹೋಬಳಿಯ ತಿಮ್ಮೋಜನಹಳ್ಳಿಯಲ್ಲಿ ಎರಡು ಮತ್ತು ಗೆದ್ದಲಪಾಳ್ಯದ ರಸ್ತೆಯಲ್ಲಿ ಒಂದು ಹುಲಿಬೇಟೆ ವೀರಗಲ್ಲುಗಳು ಲಭ್ಯವಾಗಿವೆ. ಈಗ ಇವುಗಳ ಜೊತೆಗೆ ದೊಡ್ಡಬೆಳವಂಗಲ ಹೋಬಳಿಯ ಹುಲಿಕುಂಟೆ ಗ್ರಾಮದಲ್ಲಿ ಹುಲಿಬೇಟೆಯ ವೀರಗಲ್ಲೊಂದು ಲಭ್ಯವಾಗಿದೆ. ಶಿಲ್ಪ ಲಕ್ಷಣದ ಆಧಾರದ ಮೇಲೆ ಇದನ್ನು 10ನೇ ಶತಮಾನಕ್ಕೆ ಸೇರಿಸಬಹುದು ಎನ್ನುತ್ತಾರೆ ವೆಂಕಟೇಶ್.
ವೀರನು ಆಲೀಢಭಂಗಿಯಲ್ಲಿ ನಿಂತಿದ್ದು, ತನ್ನ ಬಲಗೈಯಲ್ಲಿ ಖಡ್ಗವನ್ನು ಹಿಡಿದು ಮೇಲೆತ್ತಿರುವನು. ಎದುರುಗಡೆ ವೀರನತ್ತ ಮುನ್ನುಗ್ಗುತ್ತಿರುವ ಹುಲಿಯ ಚಿತ್ರಣವಿದೆ. ಈ ವೀರಗಲ್ಲಿನ ಮೇಲೆ ಯಾವುದೇ ರೀತಿಯ ಬರೆವಣಿಗೆ ಇಲ್ಲ. ಒಟ್ಟಾರೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಈವರೆಗೆ ನಾಲ್ಕು ಹುಲಿಬೇಟೆ ವೀರಗಲ್ಲುಗಳು ಲಭ್ಯವಾದಂತಾಯಿತು.
ಬ್ರಿಟಿಷ್ ಆಡಳಿತದ ಅವಧಿಯವರೆಗೆ ಈ ಭಾಗದಲ್ಲಿ ಹುಲಿಗಳಿದ್ದ ಮಾಹಿತಿಯಿದೆ. ಆದರೆ ರಾಜ್ಯದ ಅರಣ್ಯ ಇಲಾಖೆಗಳ ದಾಖಲೆಗಳ ಪ್ರಕಾರ 1950 ರ ನಂತರ ಇಲ್ಲಿ ಹುಲಿಗಳಿದ್ದ ಯಾವುದೇ ಮಾಹಿತಿಯಿಲ್ಲ.
ಇದೇ ಡಿಸೆಂಬರ್ 26 ಕ್ಕೆ ಹುಲಿಕುಂಟೆಯ ಬೇಟೆರಂಗನಾಥಸ್ವಾಮಿಯ ಜಾತ್ರೆಯಿದೆ. ಕಾಕತಾಳೀಯವೆಂಬಂತೆ ಈಗಲೇ ಹುಲಿಬೇಟೆ ವೀರಗಲ್ಲು ಪತ್ತೆಯಾಗಿರುವುದು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ.
ಕೆಲವರು ಈ ಹುಲಿಬೇಟೆಯ ವೀರಗಲ್ಲನ್ನು ಗ್ರಾಮನಾಮದೊಂದಿಗೆ ತಳುಕು ಹಾಕುತ್ತಿರುವುದು ವಿಶೇಷ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…