ಇಸ್ರೋದಿಂದ ಇತ್ತಿಚೇಗೆ ಉಡಾವಣೆಯಾದ ಚಂದ್ರಯಾನ -3 ಉಪಗ್ರಹ ಕುರಿತು ಉಪನ್ಯಾಸಕ, ದಲಿತ ಪರ ಹೋರಾಟಗಾರ ಹುಲಿಕುಂಟೆ ಮೂರ್ತಿ ಸಾಮಾಜಿಕ ಜಾಲತಾಣದಲ್ಲಿ ‘ ಚಂದ್ರಯಾನ ಈ ಸಾರಿ ತಿರುಪತಿ ನಾಮವೇ ಗತಿ’ ಎಂಬ ಬರಹವನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಈ ಪೋಸ್ಟ್ ಗೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ವೈಯಕ್ತಿಕವಾಗಿ ಟೀಕೆ ಮಾಡಿ, ಜೀವ ಬೆದರಿಕೆಯನ್ನು ಹಾಕಿದ್ದರು. ಈ ಘಟನೆಯನ್ನು ಖಂಡಿಸಿ ಶುಕ್ರವಾರ ತಾಲ್ಲೂಕು ಕಚೇರಿ ಮುಂಭಾಗ ವಿವಿಧ ದಲಿತ ಪರ, ಕನ್ನಡ ಪರ, ಕನ್ನಡ ಜಾಗೃತಿ ಪರಿಷತ್ ವತಿಯಿಂದ ಪ್ರತಿಭಟನೆ ಮಾಡಿ ದಲಿತ ಪರ ಹೋರಾಟಗಾರ ಹುಲಿಕುಂಟೆ ಮೂರ್ತಿ ಅವರಿಗೆ ಬೆಂಬಲ ಸೂಚಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ಕನ್ನಡ ಜಾಗೃತಿ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್, ಸರ್ಕಾರಿ ಸಂಸ್ಥೆಗಳು ಧರ್ಮಾತೀತ, ಜಾತ್ಯಾತೀತವಾಗಿ ಕೆಲಸ ನಿರ್ವಹಿಸಬೇಕು. ವೈಜ್ಞಾನಿಕವಾಗಿ ಕೆಲಸ ಮಾಡುತ್ತಿರುವ ಇಸ್ರೋ ಸಂಸ್ಥೆಯವರು 650 ಕೋಟಿ ಖರ್ಚು ಮಾಡಿ ಚಂದ್ರಯಾನ ಉಪಗ್ರಹ ಉಡಾವಣೆ ಮಾಡಿದ್ದಾರೆ. ಆದರೆ ಮೂಢನಂಬಿಕೆ, ಮೌಲ್ಯಗಳನ್ನು ತೊಲಗಿಸಬೇಕಾದವರೆ ದೇವರ ಮೊರೆ ಹೋದದ್ದು ಸರಿಯಲ್ಲ ಎಂದು ಮೂರ್ತಿ ಅವರು ಸೂಕ್ಷ್ಮವಾಗಿ ತಿಳಿಸಿದ್ದಾರೆ. ಇದನ್ನೆ ತಪ್ಪು ಎಂದು ಕೆಲ ಸಾಮಾಜಿಕ ಜಾಲತಾಣದ ಕಿಡಿಗೇಡಿಗಳು ವೈಯಕ್ತಿಕವಾಗಿ ನಿಂದಿಸಿದ್ದಾರೆ. ಜೀವ ಬೆದರಿಕೆಯನ್ನು ಹಾಕಿದ್ದಾರೆ ಎಂದು ದೂರಿದರು.
ಹಿರಿಯ ಕನ್ನಡಪರ ಹೋರಾಟಗಾರ ಸಂಜೀವನಾಯಕ್ ಮಾತನಾಡಿ, ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಮೌಢ್ಯತೆಯ ಜಾರಿಯಲ್ಲಿರುವ ಬಗ್ಗೆ ಹುಲಿಕುಂಟೆ ಮೂರ್ತಿ ಟೀಕಿಸಿದ್ದಾರೆ. ಹಿಂದಿನ ಸರ್ಕಾರದಲ್ಲಿ ಮನುವಾದಿಗಳನ್ನು ಶಿಕ್ಷಣ ಸಚಿವರನ್ನಾಗಿ ಮಾಡಿ ಶಿಕ್ಷಣ ವ್ಯವಸ್ಥೆ ಹಾಳು ಮಾಡಲು ಯತ್ನಿಸಿದ್ದರು. 650 ಕೋಟಿ ಖರ್ಚು ಮಾಡಿ ಚಂದ್ರಯಾನ -3 ಉಪಗ್ರಹ ಉಡಾವಣೆ ಮಾಡಿರುವುದು ಏತಕ್ಕಾಗಿ? ಟ್ರೋಲ್ ಮಾಡಿ ಜೀವ ಬೆದರಿಕೆ ಹಾಕಿದ ಪುಂಡರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ವೈಜ್ಞಾನಿಕವಾಗಿ ಓರ್ವ ಉಪನ್ಯಾಸಕನಾಗಿ ಹುಲಿಕುಂಟೆ ಮೂರ್ತಿ ಮಾತನಾಡಿದ್ದಾರೆ. ಮನುವಾದಿಯನ್ನು ವಿರೋಧ ವ್ಯಕ್ತಪಡಿಸಿದಾಗ ಷಡ್ಯಂತ್ರ ಮಾಡಿ ವೈಯಕ್ತಿಕವಾಗಿ ತೇಜೋವಧೆ ಮಾಡಲಾಗುತ್ತಿದೆ.
ಮೂಢನಂಬಿಕೆ, ಜಾತಿ ವ್ಯವಸ್ಥೆ ಇತರ ಸಾಮಾಜಿಕ ಪಿಡಿಗುಗಳ ವಿರುದ್ಧ ಮೂರ್ತಿ ಹೋರಾಟ ಮಾಡುತ್ತಿದ್ದಾರೆ. ಕೇವಲ ಮನುವಾದಿಗಳು ಮೂರ್ತಿಯವರನ್ನು ಟಾರ್ಗೆಟ್ ಮಾಡಿ ತೇಜೋವಧೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಹೋರಾಟಗಾರರಾದ ಸತ್ಯನಾರಾಯಣ, ಡಿ.ಪಿ.ಆಂಜನೇಯ, ರಾಜು ಸಣ್ಣಕ್ಕಿ, ಗುರುರಾಜಪ್ಪ ಹನುಮಣ್ಣ, ಗಂಗರಾಜು, ಡಿಡಿ ವೆಂಕಟೇಶ್, ಬೈರೇಗೌಡ, ಚಿದಾನಂದ, ತಳಗವಾರ ಪುನೀತ್ ಸೇರಿದಂತೆ ಮತ್ತಿತರರು ಇದ್ದರು.
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…
ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…
ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…