ಹುಲಿಕುಂಟೆ ಮೂರ್ತಿ ವೈಚಾರಿಕತೆ ಬೆಂಬಲಿಸಿದ ಕನ್ನಡ ಜಾಗೃತಿ ಪರಿಷತ್, ದಲಿತ ಪರ, ಕನ್ನಡ ಪರ ಸಂಘಟನೆಗಳು: ತೇಜೋವಧೆಗೈದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಇಸ್ರೋದಿಂದ ಇತ್ತಿಚೇಗೆ ಉಡಾವಣೆಯಾದ ಚಂದ್ರಯಾನ -3 ಉಪಗ್ರಹ ಕುರಿತು ಉಪನ್ಯಾಸಕ, ದಲಿತ ಪರ ಹೋರಾಟಗಾರ ಹುಲಿಕುಂಟೆ ಮೂರ್ತಿ ಸಾಮಾಜಿಕ ಜಾಲತಾಣದಲ್ಲಿ ‘ ಚಂದ್ರಯಾನ ಈ ಸಾರಿ ತಿರುಪತಿ ನಾಮವೇ ಗತಿ’ ಎಂಬ ಬರಹವನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಈ ಪೋಸ್ಟ್ ಗೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ವೈಯಕ್ತಿಕವಾಗಿ ಟೀಕೆ ಮಾಡಿ, ಜೀವ ಬೆದರಿಕೆಯನ್ನು ಹಾಕಿದ್ದರು. ಈ ಘಟನೆಯನ್ನು ಖಂಡಿಸಿ ಶುಕ್ರವಾರ ತಾಲ್ಲೂಕು ಕಚೇರಿ ಮುಂಭಾಗ ವಿವಿಧ ದಲಿತ ಪರ, ಕನ್ನಡ ಪರ, ಕನ್ನಡ ಜಾಗೃತಿ ಪರಿಷತ್ ವತಿಯಿಂದ ಪ್ರತಿಭಟನೆ ಮಾಡಿ ದಲಿತ ಪರ ಹೋರಾಟಗಾರ ಹುಲಿಕುಂಟೆ ಮೂರ್ತಿ ಅವರಿಗೆ ಬೆಂಬಲ ಸೂಚಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಕನ್ನಡ ಜಾಗೃತಿ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್, ಸರ್ಕಾರಿ ಸಂಸ್ಥೆಗಳು ಧರ್ಮಾತೀತ, ಜಾತ್ಯಾತೀತವಾಗಿ ಕೆಲಸ ನಿರ್ವಹಿಸಬೇಕು. ವೈಜ್ಞಾನಿಕವಾಗಿ ಕೆಲಸ ಮಾಡುತ್ತಿರುವ ಇಸ್ರೋ ಸಂಸ್ಥೆಯವರು 650 ಕೋಟಿ ಖರ್ಚು ಮಾಡಿ ಚಂದ್ರಯಾನ ಉಪಗ್ರಹ ಉಡಾವಣೆ ಮಾಡಿದ್ದಾರೆ. ಆದರೆ ಮೂಢನಂಬಿಕೆ, ಮೌಲ್ಯಗಳನ್ನು ತೊಲಗಿಸಬೇಕಾದವರೆ ದೇವರ ಮೊರೆ ಹೋದದ್ದು ಸರಿಯಲ್ಲ ಎಂದು ಮೂರ್ತಿ ಅವರು ಸೂಕ್ಷ್ಮವಾಗಿ ತಿಳಿಸಿದ್ದಾರೆ. ಇದನ್ನೆ ತಪ್ಪು ಎಂದು ಕೆಲ ಸಾಮಾಜಿಕ ಜಾಲತಾಣದ ಕಿಡಿಗೇಡಿಗಳು ವೈಯಕ್ತಿಕವಾಗಿ ನಿಂದಿಸಿದ್ದಾರೆ. ಜೀವ ಬೆದರಿಕೆಯನ್ನು ಹಾಕಿದ್ದಾರೆ ಎಂದು ದೂರಿದರು.

ಸಂವಿಧಾನ, ಸರ್ಕಾರಿ ನಿಯಮಗಳಿಗೆ ತಕ್ಕಂತೆ ನಡೆದುಕೊಳ್ಳಬೇಕು. ಇಂದಿನ ಸಮಾಜದಲ್ಲಿ ಮನುಷ್ಯತ್ವವನ್ನೆ ಮರೆಯಲಾಗುತ್ತಿದೆ. ವ್ಯವಸ್ಥೆ ಸಾಕಷ್ಟು ವಿಕೃತವಾಗಿ ಬದಲಾಗಿದೆ. ಹೀಗಾಗಿ ನಾವು ಮನುಷ್ಯತ್ವದ ಪರ ಮಾತನಾಡುತ್ತಿದ್ದೇವೆ ಎಂದರು.

ಹಿರಿಯ ಕನ್ನಡಪರ ಹೋರಾಟಗಾರ ಸಂಜೀವನಾಯಕ್ ಮಾತನಾಡಿ, ಸ್ವಾತಂತ್ರ‍್ಯ ಬಂದು 75 ವರ್ಷಗಳಾದರೂ ಮೌಢ್ಯತೆಯ ಜಾರಿಯಲ್ಲಿರುವ ಬಗ್ಗೆ ಹುಲಿಕುಂಟೆ ಮೂರ್ತಿ ಟೀಕಿಸಿದ್ದಾರೆ. ಹಿಂದಿನ ಸರ್ಕಾರದಲ್ಲಿ ಮನುವಾದಿಗಳನ್ನು ಶಿಕ್ಷಣ ಸಚಿವರನ್ನಾಗಿ ಮಾಡಿ ಶಿಕ್ಷಣ ವ್ಯವಸ್ಥೆ ಹಾಳು ಮಾಡಲು ಯತ್ನಿಸಿದ್ದರು. 650 ಕೋಟಿ ಖರ್ಚು ಮಾಡಿ ಚಂದ್ರಯಾನ -3 ಉಪಗ್ರಹ ಉಡಾವಣೆ ಮಾಡಿರುವುದು ಏತಕ್ಕಾಗಿ? ಟ್ರೋಲ್ ಮಾಡಿ ಜೀವ ಬೆದರಿಕೆ ಹಾಕಿದ ಪುಂಡರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ವೈಜ್ಞಾನಿಕವಾಗಿ ಓರ್ವ ಉಪನ್ಯಾಸಕನಾಗಿ ಹುಲಿಕುಂಟೆ ಮೂರ್ತಿ ಮಾತನಾಡಿದ್ದಾರೆ. ಮನುವಾದಿಯನ್ನು ವಿರೋಧ ವ್ಯಕ್ತಪಡಿಸಿದಾಗ ಷಡ್ಯಂತ್ರ ಮಾಡಿ ವೈಯಕ್ತಿಕವಾಗಿ ತೇಜೋವಧೆ ಮಾಡಲಾಗುತ್ತಿದೆ.
ಮೂಢನಂಬಿಕೆ, ಜಾತಿ ವ್ಯವಸ್ಥೆ ಇತರ ಸಾಮಾಜಿಕ ಪಿಡಿಗುಗಳ ವಿರುದ್ಧ ಮೂರ್ತಿ ಹೋರಾಟ ಮಾಡುತ್ತಿದ್ದಾರೆ. ಕೇವಲ ಮನುವಾದಿಗಳು ಮೂರ್ತಿಯವರನ್ನು ಟಾರ್ಗೆಟ್ ಮಾಡಿ ತೇಜೋವಧೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಮುಖಂಡ ಗುರುರಾಜಪ್ಪ ಮಾತನಾಡಿ, ಮೂರ್ತಿ ಅವರಿಗೆ ಹಲವು ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿರುವುದರಿಂದ ಸರ್ಕಾರ ಅಂಗರಕ್ಷಕರನ್ನು ನೇಮಿಸಬೇಕು. ಇಲ್ಲವಾದಲ್ಲಿ ಗೌರಿ ಲಂಕೇಶ್ ರನ್ನು ಕೊಲೆಗೈದಂತೆ ಇವರಿಗೂ ಅಟ್ಟಹಾಸ ಮೇರೆಯುತ್ತಾರೆ. ಜೀವ ಬೆದರಿಕೆ ಕುರಿತು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ 30 ಮಂದಿ ವಿರುದ್ಧ ದೂರು ದಾಖಲಿಸಲಾಗಿದೆ ಎಂದರು.

ಈ ವೇಳೆ ಹೋರಾಟಗಾರರಾದ ಸತ್ಯನಾರಾಯಣ, ಡಿ.ಪಿ.ಆಂಜನೇಯ, ರಾಜು ಸಣ್ಣಕ್ಕಿ, ಗುರುರಾಜಪ್ಪ ಹನುಮಣ್ಣ, ಗಂಗರಾಜು, ಡಿಡಿ ವೆಂಕಟೇಶ್, ಬೈರೇಗೌಡ, ಚಿದಾನಂದ, ತಳಗವಾರ ಪುನೀತ್ ಸೇರಿದಂತೆ ಮತ್ತಿತರರು ಇದ್ದರು.

Ramesh Babu

Journalist

Recent Posts

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

1 hour ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

2 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

16 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

19 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago