ಹುಲಿಕುಂಟೆ ಮೂರ್ತಿ ವೈಚಾರಿಕತೆ ಬೆಂಬಲಿಸಿದ ಕನ್ನಡ ಜಾಗೃತಿ ಪರಿಷತ್, ದಲಿತ ಪರ, ಕನ್ನಡ ಪರ ಸಂಘಟನೆಗಳು: ತೇಜೋವಧೆಗೈದ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಇಸ್ರೋದಿಂದ ಇತ್ತಿಚೇಗೆ ಉಡಾವಣೆಯಾದ ಚಂದ್ರಯಾನ -3 ಉಪಗ್ರಹ ಕುರಿತು ಉಪನ್ಯಾಸಕ, ದಲಿತ ಪರ ಹೋರಾಟಗಾರ ಹುಲಿಕುಂಟೆ ಮೂರ್ತಿ ಸಾಮಾಜಿಕ ಜಾಲತಾಣದಲ್ಲಿ ‘ ಚಂದ್ರಯಾನ ಈ ಸಾರಿ ತಿರುಪತಿ ನಾಮವೇ ಗತಿ’ ಎಂಬ ಬರಹವನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಈ ಪೋಸ್ಟ್ ಗೆ ಹಲವರು ವಿರೋಧ ವ್ಯಕ್ತಪಡಿಸಿದ್ದರು. ಕೆಲವರು ಒಂದು ಹೆಜ್ಜೆ ಮುಂದೆ ಹೋಗಿ ವೈಯಕ್ತಿಕವಾಗಿ ಟೀಕೆ ಮಾಡಿ, ಜೀವ ಬೆದರಿಕೆಯನ್ನು ಹಾಕಿದ್ದರು. ಈ ಘಟನೆಯನ್ನು ಖಂಡಿಸಿ ಶುಕ್ರವಾರ ತಾಲ್ಲೂಕು ಕಚೇರಿ ಮುಂಭಾಗ ವಿವಿಧ ದಲಿತ ಪರ, ಕನ್ನಡ ಪರ, ಕನ್ನಡ ಜಾಗೃತಿ ಪರಿಷತ್ ವತಿಯಿಂದ ಪ್ರತಿಭಟನೆ ಮಾಡಿ ದಲಿತ ಪರ ಹೋರಾಟಗಾರ ಹುಲಿಕುಂಟೆ ಮೂರ್ತಿ ಅವರಿಗೆ ಬೆಂಬಲ ಸೂಚಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಕನ್ನಡ ಜಾಗೃತಿ ಪರಿಷತ್ ಅಧ್ಯಕ್ಷ ಕೆ.ವೆಂಕಟೇಶ್, ಸರ್ಕಾರಿ ಸಂಸ್ಥೆಗಳು ಧರ್ಮಾತೀತ, ಜಾತ್ಯಾತೀತವಾಗಿ ಕೆಲಸ ನಿರ್ವಹಿಸಬೇಕು. ವೈಜ್ಞಾನಿಕವಾಗಿ ಕೆಲಸ ಮಾಡುತ್ತಿರುವ ಇಸ್ರೋ ಸಂಸ್ಥೆಯವರು 650 ಕೋಟಿ ಖರ್ಚು ಮಾಡಿ ಚಂದ್ರಯಾನ ಉಪಗ್ರಹ ಉಡಾವಣೆ ಮಾಡಿದ್ದಾರೆ. ಆದರೆ ಮೂಢನಂಬಿಕೆ, ಮೌಲ್ಯಗಳನ್ನು ತೊಲಗಿಸಬೇಕಾದವರೆ ದೇವರ ಮೊರೆ ಹೋದದ್ದು ಸರಿಯಲ್ಲ ಎಂದು ಮೂರ್ತಿ ಅವರು ಸೂಕ್ಷ್ಮವಾಗಿ ತಿಳಿಸಿದ್ದಾರೆ. ಇದನ್ನೆ ತಪ್ಪು ಎಂದು ಕೆಲ ಸಾಮಾಜಿಕ ಜಾಲತಾಣದ ಕಿಡಿಗೇಡಿಗಳು ವೈಯಕ್ತಿಕವಾಗಿ ನಿಂದಿಸಿದ್ದಾರೆ. ಜೀವ ಬೆದರಿಕೆಯನ್ನು ಹಾಕಿದ್ದಾರೆ ಎಂದು ದೂರಿದರು.

ಸಂವಿಧಾನ, ಸರ್ಕಾರಿ ನಿಯಮಗಳಿಗೆ ತಕ್ಕಂತೆ ನಡೆದುಕೊಳ್ಳಬೇಕು. ಇಂದಿನ ಸಮಾಜದಲ್ಲಿ ಮನುಷ್ಯತ್ವವನ್ನೆ ಮರೆಯಲಾಗುತ್ತಿದೆ. ವ್ಯವಸ್ಥೆ ಸಾಕಷ್ಟು ವಿಕೃತವಾಗಿ ಬದಲಾಗಿದೆ. ಹೀಗಾಗಿ ನಾವು ಮನುಷ್ಯತ್ವದ ಪರ ಮಾತನಾಡುತ್ತಿದ್ದೇವೆ ಎಂದರು.

ಹಿರಿಯ ಕನ್ನಡಪರ ಹೋರಾಟಗಾರ ಸಂಜೀವನಾಯಕ್ ಮಾತನಾಡಿ, ಸ್ವಾತಂತ್ರ‍್ಯ ಬಂದು 75 ವರ್ಷಗಳಾದರೂ ಮೌಢ್ಯತೆಯ ಜಾರಿಯಲ್ಲಿರುವ ಬಗ್ಗೆ ಹುಲಿಕುಂಟೆ ಮೂರ್ತಿ ಟೀಕಿಸಿದ್ದಾರೆ. ಹಿಂದಿನ ಸರ್ಕಾರದಲ್ಲಿ ಮನುವಾದಿಗಳನ್ನು ಶಿಕ್ಷಣ ಸಚಿವರನ್ನಾಗಿ ಮಾಡಿ ಶಿಕ್ಷಣ ವ್ಯವಸ್ಥೆ ಹಾಳು ಮಾಡಲು ಯತ್ನಿಸಿದ್ದರು. 650 ಕೋಟಿ ಖರ್ಚು ಮಾಡಿ ಚಂದ್ರಯಾನ -3 ಉಪಗ್ರಹ ಉಡಾವಣೆ ಮಾಡಿರುವುದು ಏತಕ್ಕಾಗಿ? ಟ್ರೋಲ್ ಮಾಡಿ ಜೀವ ಬೆದರಿಕೆ ಹಾಕಿದ ಪುಂಡರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ವೈಜ್ಞಾನಿಕವಾಗಿ ಓರ್ವ ಉಪನ್ಯಾಸಕನಾಗಿ ಹುಲಿಕುಂಟೆ ಮೂರ್ತಿ ಮಾತನಾಡಿದ್ದಾರೆ. ಮನುವಾದಿಯನ್ನು ವಿರೋಧ ವ್ಯಕ್ತಪಡಿಸಿದಾಗ ಷಡ್ಯಂತ್ರ ಮಾಡಿ ವೈಯಕ್ತಿಕವಾಗಿ ತೇಜೋವಧೆ ಮಾಡಲಾಗುತ್ತಿದೆ.
ಮೂಢನಂಬಿಕೆ, ಜಾತಿ ವ್ಯವಸ್ಥೆ ಇತರ ಸಾಮಾಜಿಕ ಪಿಡಿಗುಗಳ ವಿರುದ್ಧ ಮೂರ್ತಿ ಹೋರಾಟ ಮಾಡುತ್ತಿದ್ದಾರೆ. ಕೇವಲ ಮನುವಾದಿಗಳು ಮೂರ್ತಿಯವರನ್ನು ಟಾರ್ಗೆಟ್ ಮಾಡಿ ತೇಜೋವಧೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಮುಖಂಡ ಗುರುರಾಜಪ್ಪ ಮಾತನಾಡಿ, ಮೂರ್ತಿ ಅವರಿಗೆ ಹಲವು ಕಿಡಿಗೇಡಿಗಳು ಜೀವ ಬೆದರಿಕೆ ಒಡ್ಡಿರುವುದರಿಂದ ಸರ್ಕಾರ ಅಂಗರಕ್ಷಕರನ್ನು ನೇಮಿಸಬೇಕು. ಇಲ್ಲವಾದಲ್ಲಿ ಗೌರಿ ಲಂಕೇಶ್ ರನ್ನು ಕೊಲೆಗೈದಂತೆ ಇವರಿಗೂ ಅಟ್ಟಹಾಸ ಮೇರೆಯುತ್ತಾರೆ. ಜೀವ ಬೆದರಿಕೆ ಕುರಿತು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ 30 ಮಂದಿ ವಿರುದ್ಧ ದೂರು ದಾಖಲಿಸಲಾಗಿದೆ ಎಂದರು.

ಈ ವೇಳೆ ಹೋರಾಟಗಾರರಾದ ಸತ್ಯನಾರಾಯಣ, ಡಿ.ಪಿ.ಆಂಜನೇಯ, ರಾಜು ಸಣ್ಣಕ್ಕಿ, ಗುರುರಾಜಪ್ಪ ಹನುಮಣ್ಣ, ಗಂಗರಾಜು, ಡಿಡಿ ವೆಂಕಟೇಶ್, ಬೈರೇಗೌಡ, ಚಿದಾನಂದ, ತಳಗವಾರ ಪುನೀತ್ ಸೇರಿದಂತೆ ಮತ್ತಿತರರು ಇದ್ದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

9 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

15 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

16 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago