ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನ ಕೊಂದ ಆರೋಪಿಗಳು ಕೊನೆಗೂ ಅಂದರ್ ಆಗಿದ್ದಾರೆ. ಹುಲಿ ಹತ್ಯೆಯ ಅಸಲಿತ್ತನ್ನ ಖಾಕಿ ಪಡೆ ಬಾಯಿ ಬಿಡಿಸಿದ್ದಾರೆ. ವ್ಯಾಘ್ರಗಳನ್ನ ಕೊಂದವರು ಸ್ಪೋಟಕ ಸತ್ಯವನ್ನು ಬಾಯಿ ಬಿಟ್ಟಿದ್ದಾರೆ. ಬಂಧಿತರಾದ ಮಾದರಾಜು, ನಾಗರಾಜ್ ಮತ್ತು ಕೋನಪ್ಪನನ್ನು ಮೂರು ದಿನ ಅರಣ್ಯಾಧಿಕಾರಿಗಳ ಕಸ್ಟಡಿಗೆ ನೀಡಿ ನ್ಯಾಯಾಧೀಶೆ ಎಂ.ಕಾವ್ಯಶ್ರೀ ಶನಿವಾರ ಆದೇಶ ಹೊರಡಿಸಿದ್ದಾರೆ.
ಜೂನ್ 23ರಂದು ಕೊಳ್ಳೇಗಾಲದ ಮೀಣ್ಯ ಅರಣ್ಯದಲ್ಲಿ, ಈ ಮಾದುರಾಜುವಿನ ಹಸುವನ್ನ ಹುಲಿ ಬೇಟೆ ಆಡಿತ್ತು. ತಾನು ತುಂಬ ಪ್ರೀತಿಸುತ್ತಿದ್ದ ಹಸುವನ್ನ, ಹುಲಿ ಕೊಂದಿದ್ದನ್ನ ನೋಡಿ ಮಾದುರಾಜು ಮನನೊಂದಿದ್ದ. ಹುಲಿಯ ಮೇಲೆ ಕೋಪಗೊಂಡಿದ್ದ. ಹಸುವನ್ನ ಬೇಟೆಯಾಡಿದ್ದ ಹುಲಿ ಮತ್ತೆ, ಹಸು ಮಾಂಸ ತಿನ್ನೋದಕ್ಕೆ ಬರುತ್ತೆ ಅಂತ ತಿಳಿದಿದ್ದ ಮಾದುರಾಜು, ಹಸುವಿನ ಶವಕ್ಕೆ ನಾಗರಾಜ್, ಕೋನಪ್ಪನ ಜತೆ ಸೇರಿ ಕ್ರಿಮಿನಾಶಕ ವಿಷ ಬೆರೆಸಿದ್ದ. ಹೀಗಾಗಿ, ವಿಷವಿಕ್ಕಿದ್ದ ಹಸುವಿನ ದೇಹವನ್ನ ತಿಂದಿದ್ರಿಂದಲೇ ಹುಲಿ ಮತ್ತು 4 ಮರಿಗಳು ಪ್ರಾಣಬಿಟ್ಟಿರುವುದು ಈಗಾಗಲೇ ಬಯಲಾಗಿದೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…