ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನ ಕೊಂದ ಆರೋಪಿಗಳು ಕೊನೆಗೂ ಅಂದರ್ ಆಗಿದ್ದಾರೆ. ಹುಲಿ ಹತ್ಯೆಯ ಅಸಲಿತ್ತನ್ನ ಖಾಕಿ ಪಡೆ ಬಾಯಿ ಬಿಡಿಸಿದ್ದಾರೆ. ವ್ಯಾಘ್ರಗಳನ್ನ ಕೊಂದವರು ಸ್ಪೋಟಕ ಸತ್ಯವನ್ನು ಬಾಯಿ ಬಿಟ್ಟಿದ್ದಾರೆ. ಬಂಧಿತರಾದ ಮಾದರಾಜು, ನಾಗರಾಜ್ ಮತ್ತು ಕೋನಪ್ಪನನ್ನು ಮೂರು ದಿನ ಅರಣ್ಯಾಧಿಕಾರಿಗಳ ಕಸ್ಟಡಿಗೆ ನೀಡಿ ನ್ಯಾಯಾಧೀಶೆ ಎಂ.ಕಾವ್ಯಶ್ರೀ ಶನಿವಾರ ಆದೇಶ ಹೊರಡಿಸಿದ್ದಾರೆ.
ಜೂನ್ 23ರಂದು ಕೊಳ್ಳೇಗಾಲದ ಮೀಣ್ಯ ಅರಣ್ಯದಲ್ಲಿ, ಈ ಮಾದುರಾಜುವಿನ ಹಸುವನ್ನ ಹುಲಿ ಬೇಟೆ ಆಡಿತ್ತು. ತಾನು ತುಂಬ ಪ್ರೀತಿಸುತ್ತಿದ್ದ ಹಸುವನ್ನ, ಹುಲಿ ಕೊಂದಿದ್ದನ್ನ ನೋಡಿ ಮಾದುರಾಜು ಮನನೊಂದಿದ್ದ. ಹುಲಿಯ ಮೇಲೆ ಕೋಪಗೊಂಡಿದ್ದ. ಹಸುವನ್ನ ಬೇಟೆಯಾಡಿದ್ದ ಹುಲಿ ಮತ್ತೆ, ಹಸು ಮಾಂಸ ತಿನ್ನೋದಕ್ಕೆ ಬರುತ್ತೆ ಅಂತ ತಿಳಿದಿದ್ದ ಮಾದುರಾಜು, ಹಸುವಿನ ಶವಕ್ಕೆ ನಾಗರಾಜ್, ಕೋನಪ್ಪನ ಜತೆ ಸೇರಿ ಕ್ರಿಮಿನಾಶಕ ವಿಷ ಬೆರೆಸಿದ್ದ. ಹೀಗಾಗಿ, ವಿಷವಿಕ್ಕಿದ್ದ ಹಸುವಿನ ದೇಹವನ್ನ ತಿಂದಿದ್ರಿಂದಲೇ ಹುಲಿ ಮತ್ತು 4 ಮರಿಗಳು ಪ್ರಾಣಬಿಟ್ಟಿರುವುದು ಈಗಾಗಲೇ ಬಯಲಾಗಿದೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…