ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನ ಕೊಂದ ಆರೋಪಿಗಳು ಕೊನೆಗೂ ಅಂದರ್ ಆಗಿದ್ದಾರೆ. ಹುಲಿ ಹತ್ಯೆಯ ಅಸಲಿತ್ತನ್ನ ಖಾಕಿ ಪಡೆ ಬಾಯಿ ಬಿಡಿಸಿದ್ದಾರೆ. ವ್ಯಾಘ್ರಗಳನ್ನ ಕೊಂದವರು ಸ್ಪೋಟಕ ಸತ್ಯವನ್ನು ಬಾಯಿ ಬಿಟ್ಟಿದ್ದಾರೆ. ಬಂಧಿತರಾದ ಮಾದರಾಜು, ನಾಗರಾಜ್ ಮತ್ತು ಕೋನಪ್ಪನನ್ನು ಮೂರು ದಿನ ಅರಣ್ಯಾಧಿಕಾರಿಗಳ ಕಸ್ಟಡಿಗೆ ನೀಡಿ ನ್ಯಾಯಾಧೀಶೆ ಎಂ.ಕಾವ್ಯಶ್ರೀ ಶನಿವಾರ ಆದೇಶ ಹೊರಡಿಸಿದ್ದಾರೆ.
ಜೂನ್ 23ರಂದು ಕೊಳ್ಳೇಗಾಲದ ಮೀಣ್ಯ ಅರಣ್ಯದಲ್ಲಿ, ಈ ಮಾದುರಾಜುವಿನ ಹಸುವನ್ನ ಹುಲಿ ಬೇಟೆ ಆಡಿತ್ತು. ತಾನು ತುಂಬ ಪ್ರೀತಿಸುತ್ತಿದ್ದ ಹಸುವನ್ನ, ಹುಲಿ ಕೊಂದಿದ್ದನ್ನ ನೋಡಿ ಮಾದುರಾಜು ಮನನೊಂದಿದ್ದ. ಹುಲಿಯ ಮೇಲೆ ಕೋಪಗೊಂಡಿದ್ದ. ಹಸುವನ್ನ ಬೇಟೆಯಾಡಿದ್ದ ಹುಲಿ ಮತ್ತೆ, ಹಸು ಮಾಂಸ ತಿನ್ನೋದಕ್ಕೆ ಬರುತ್ತೆ ಅಂತ ತಿಳಿದಿದ್ದ ಮಾದುರಾಜು, ಹಸುವಿನ ಶವಕ್ಕೆ ನಾಗರಾಜ್, ಕೋನಪ್ಪನ ಜತೆ ಸೇರಿ ಕ್ರಿಮಿನಾಶಕ ವಿಷ ಬೆರೆಸಿದ್ದ. ಹೀಗಾಗಿ, ವಿಷವಿಕ್ಕಿದ್ದ ಹಸುವಿನ ದೇಹವನ್ನ ತಿಂದಿದ್ರಿಂದಲೇ ಹುಲಿ ಮತ್ತು 4 ಮರಿಗಳು ಪ್ರಾಣಬಿಟ್ಟಿರುವುದು ಈಗಾಗಲೇ ಬಯಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…
ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…
ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…