ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನ ಕೊಂದ ಆರೋಪಿಗಳು ಕೊನೆಗೂ ಅಂದರ್ ಆಗಿದ್ದಾರೆ. ಹುಲಿ ಹತ್ಯೆಯ ಅಸಲಿತ್ತನ್ನ ಖಾಕಿ ಪಡೆ ಬಾಯಿ ಬಿಡಿಸಿದ್ದಾರೆ. ವ್ಯಾಘ್ರಗಳನ್ನ ಕೊಂದವರು ಸ್ಪೋಟಕ ಸತ್ಯವನ್ನು ಬಾಯಿ ಬಿಟ್ಟಿದ್ದಾರೆ. ಬಂಧಿತರಾದ ಮಾದರಾಜು, ನಾಗರಾಜ್ ಮತ್ತು ಕೋನಪ್ಪನನ್ನು ಮೂರು ದಿನ ಅರಣ್ಯಾಧಿಕಾರಿಗಳ ಕಸ್ಟಡಿಗೆ ನೀಡಿ ನ್ಯಾಯಾಧೀಶೆ ಎಂ.ಕಾವ್ಯಶ್ರೀ ಶನಿವಾರ ಆದೇಶ ಹೊರಡಿಸಿದ್ದಾರೆ.
ಜೂನ್ 23ರಂದು ಕೊಳ್ಳೇಗಾಲದ ಮೀಣ್ಯ ಅರಣ್ಯದಲ್ಲಿ, ಈ ಮಾದುರಾಜುವಿನ ಹಸುವನ್ನ ಹುಲಿ ಬೇಟೆ ಆಡಿತ್ತು. ತಾನು ತುಂಬ ಪ್ರೀತಿಸುತ್ತಿದ್ದ ಹಸುವನ್ನ, ಹುಲಿ ಕೊಂದಿದ್ದನ್ನ ನೋಡಿ ಮಾದುರಾಜು ಮನನೊಂದಿದ್ದ. ಹುಲಿಯ ಮೇಲೆ ಕೋಪಗೊಂಡಿದ್ದ. ಹಸುವನ್ನ ಬೇಟೆಯಾಡಿದ್ದ ಹುಲಿ ಮತ್ತೆ, ಹಸು ಮಾಂಸ ತಿನ್ನೋದಕ್ಕೆ ಬರುತ್ತೆ ಅಂತ ತಿಳಿದಿದ್ದ ಮಾದುರಾಜು, ಹಸುವಿನ ಶವಕ್ಕೆ ನಾಗರಾಜ್, ಕೋನಪ್ಪನ ಜತೆ ಸೇರಿ ಕ್ರಿಮಿನಾಶಕ ವಿಷ ಬೆರೆಸಿದ್ದ. ಹೀಗಾಗಿ, ವಿಷವಿಕ್ಕಿದ್ದ ಹಸುವಿನ ದೇಹವನ್ನ ತಿಂದಿದ್ರಿಂದಲೇ ಹುಲಿ ಮತ್ತು 4 ಮರಿಗಳು ಪ್ರಾಣಬಿಟ್ಟಿರುವುದು ಈಗಾಗಲೇ ಬಯಲಾಗಿದೆ.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…