ಹುಲುಕುಡಿ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ: ಜಾತ್ರೆಯಲ್ಲಿ ಕಳ್ಳರ ಕೈಚಳಕ: ವೃದ್ಧೆಯ ಮೊಬೈಲ್, ಪರ್ಸ್ ಎಗರಿಸಿ ಪರಾರಿಯಾಗಲು ಯತ್ನ:‌ ಅಲ್ಲೇ ಇದ್ದ ಪೊಲೀಸ್ ಸಿಬ್ಬಂದಿ ಕಂಡು ಮೊಬೈಲ್, ಪರ್ಸ್ ಬಿಸಾಡಿ ಎಸ್ಕೇಪ್: ಮೊಬೈಲ್, ಪರ್ಸ್ ವೃದ್ಧೆಗೆ ವಾಪಸ್

ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ನಿನ್ನೆ (ಫೆ.05) ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ ನಡೆಯಿತು.

ರಥೋತ್ಸವ ಕಣ್ತುಂಬಿಕೊಳ್ಳಲು ವೃದ್ಧರು, ಮಕ್ಕಳು, ಯುವಕರು ಸೇರಿದಂತೆ ಎಲ್ಲರು ಆಗಮಿಸಿದ್ದರು. ಜನಜಂಗಳಿಯಲ್ಲಿ ಸಾರ್ವಜನಿಕ‌ ಹಿತದೃಷ್ಟಿಯಿಂದ  ಪೊಲೀಸ್ ಬಿಗಿಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಇದರ ನಡುವೆಯೂ ಕಳ್ಳರ ಕೈಚಳಕ ತೋರಿಸಲು ಯತ್ನಿಸಿದ್ದಾರೆ.

ಕಳ್ಳರು ಜಾತ್ರೆಯಲ್ಲಿ ವೃದ್ಧರನ್ನೇ ಟಾರ್ಗೆಟ್ ಮಾಡಿ, ವೃದ್ಧೆ ಬಳಿಯಿದ್ದ ಮೊಬೈಲ್ ಹಾಗೂ ಪರ್ಸ್ ನ್ನು ಎಗರಿಸಿ ಪರಾರಿಯಾಗಲು ಕಳ್ಳ ಯತ್ನಿಸಿದ್ದಾನೆ.‌ ಅಜ್ಜಿ ಇದ್ದ ಸ್ವಲ್ಪ ದೂರದಲ್ಲೇ ಪೊಲೀಸ್ ಸಿಬ್ಬಂದಿ ಇರುವುದನ್ನು ಗಮನಿಸಿದ ಕಳ್ಳ ಕಳವು ಮಾಡಿದ್ದ ಮೊಬೈಲ್, ಪರ್ಸ್ ಅಲ್ಲೇ ಎಸೆದು ಪರಾರಿಯಾಗಿದ್ದಾನೆ.

ಸದ್ಯ ಮೊಬೈಲ್ ಹಾಗೂ ಪರ್ಸ್ ನ್ನು ಪೊಲೀಸರ ವಶಕ್ಕೆ ಪಡೆದು ವೃದ್ಧೆಗೆ ಒಪ್ಪಿಸಿದ್ದಾರೆ.

ದೊಡ್ಡಬೆಳವಂಗಲ ಪೊಲೀಸರ ಕಾರ್ಯವೈಖರಿಗೆ ವೃದ್ಧೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಬೆಂ.ಗ್ರಾ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಆಗಿ ಎ.ವಿ ಲಕ್ಷ್ಮಿನಾರಾಯಣ ನೇಮಕ

ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…

2 hours ago

ಬೆಳಗಾವಿಯಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ದಾಳಿ: ದಾಳಿ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ಪತ್ತೆ

ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ  14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…

2 hours ago

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿರೋ ದುಷ್ಕರ್ಮಿಗಳು

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಅವರನ್ನು ಧಾರವಾಡ ನಗರದ ಹಾಶ್ಮಿನಗರದಲ್ಲಿ ಇರುವ ಮನೆಯಲ್ಲೇ ಹತ್ಯೆ ಮಾಡಿರುವ ಘಟನೆ…

2 hours ago

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

4 hours ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

4 hours ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

19 hours ago