ಹುಲುಕುಡಿ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ: ಜಾತ್ರೆಯಲ್ಲಿ ಕಳ್ಳರ ಕೈಚಳಕ: ವೃದ್ಧೆಯ ಮೊಬೈಲ್, ಪರ್ಸ್ ಎಗರಿಸಿ ಪರಾರಿಯಾಗಲು ಯತ್ನ:‌ ಅಲ್ಲೇ ಇದ್ದ ಪೊಲೀಸ್ ಸಿಬ್ಬಂದಿ ಕಂಡು ಮೊಬೈಲ್, ಪರ್ಸ್ ಬಿಸಾಡಿ ಎಸ್ಕೇಪ್: ಮೊಬೈಲ್, ಪರ್ಸ್ ವೃದ್ಧೆಗೆ ವಾಪಸ್

ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ನಿನ್ನೆ (ಫೆ.05) ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ ನಡೆಯಿತು.

ರಥೋತ್ಸವ ಕಣ್ತುಂಬಿಕೊಳ್ಳಲು ವೃದ್ಧರು, ಮಕ್ಕಳು, ಯುವಕರು ಸೇರಿದಂತೆ ಎಲ್ಲರು ಆಗಮಿಸಿದ್ದರು. ಜನಜಂಗಳಿಯಲ್ಲಿ ಸಾರ್ವಜನಿಕ‌ ಹಿತದೃಷ್ಟಿಯಿಂದ  ಪೊಲೀಸ್ ಬಿಗಿಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಇದರ ನಡುವೆಯೂ ಕಳ್ಳರ ಕೈಚಳಕ ತೋರಿಸಲು ಯತ್ನಿಸಿದ್ದಾರೆ.

ಕಳ್ಳರು ಜಾತ್ರೆಯಲ್ಲಿ ವೃದ್ಧರನ್ನೇ ಟಾರ್ಗೆಟ್ ಮಾಡಿ, ವೃದ್ಧೆ ಬಳಿಯಿದ್ದ ಮೊಬೈಲ್ ಹಾಗೂ ಪರ್ಸ್ ನ್ನು ಎಗರಿಸಿ ಪರಾರಿಯಾಗಲು ಕಳ್ಳ ಯತ್ನಿಸಿದ್ದಾನೆ.‌ ಅಜ್ಜಿ ಇದ್ದ ಸ್ವಲ್ಪ ದೂರದಲ್ಲೇ ಪೊಲೀಸ್ ಸಿಬ್ಬಂದಿ ಇರುವುದನ್ನು ಗಮನಿಸಿದ ಕಳ್ಳ ಕಳವು ಮಾಡಿದ್ದ ಮೊಬೈಲ್, ಪರ್ಸ್ ಅಲ್ಲೇ ಎಸೆದು ಪರಾರಿಯಾಗಿದ್ದಾನೆ.

ಸದ್ಯ ಮೊಬೈಲ್ ಹಾಗೂ ಪರ್ಸ್ ನ್ನು ಪೊಲೀಸರ ವಶಕ್ಕೆ ಪಡೆದು ವೃದ್ಧೆಗೆ ಒಪ್ಪಿಸಿದ್ದಾರೆ.

ದೊಡ್ಡಬೆಳವಂಗಲ ಪೊಲೀಸರ ಕಾರ್ಯವೈಖರಿಗೆ ವೃದ್ಧೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ನೊಂದವರ ನೋವಾ ನೋಯದವರೆತ್ತ ಬಲ್ಲರೋ……

ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…

2 hours ago

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

16 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

16 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

1 day ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

2 days ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago