ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ನಿನ್ನೆ (ಫೆ.05) ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ ನಡೆಯಿತು.
ರಥೋತ್ಸವ ಕಣ್ತುಂಬಿಕೊಳ್ಳಲು ವೃದ್ಧರು, ಮಕ್ಕಳು, ಯುವಕರು ಸೇರಿದಂತೆ ಎಲ್ಲರು ಆಗಮಿಸಿದ್ದರು. ಜನಜಂಗಳಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಪೊಲೀಸ್ ಬಿಗಿಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಇದರ ನಡುವೆಯೂ ಕಳ್ಳರ ಕೈಚಳಕ ತೋರಿಸಲು ಯತ್ನಿಸಿದ್ದಾರೆ.
ಕಳ್ಳರು ಜಾತ್ರೆಯಲ್ಲಿ ವೃದ್ಧರನ್ನೇ ಟಾರ್ಗೆಟ್ ಮಾಡಿ, ವೃದ್ಧೆ ಬಳಿಯಿದ್ದ ಮೊಬೈಲ್ ಹಾಗೂ ಪರ್ಸ್ ನ್ನು ಎಗರಿಸಿ ಪರಾರಿಯಾಗಲು ಕಳ್ಳ ಯತ್ನಿಸಿದ್ದಾನೆ. ಅಜ್ಜಿ ಇದ್ದ ಸ್ವಲ್ಪ ದೂರದಲ್ಲೇ ಪೊಲೀಸ್ ಸಿಬ್ಬಂದಿ ಇರುವುದನ್ನು ಗಮನಿಸಿದ ಕಳ್ಳ ಕಳವು ಮಾಡಿದ್ದ ಮೊಬೈಲ್, ಪರ್ಸ್ ಅಲ್ಲೇ ಎಸೆದು ಪರಾರಿಯಾಗಿದ್ದಾನೆ.
ಸದ್ಯ ಮೊಬೈಲ್ ಹಾಗೂ ಪರ್ಸ್ ನ್ನು ಪೊಲೀಸರ ವಶಕ್ಕೆ ಪಡೆದು ವೃದ್ಧೆಗೆ ಒಪ್ಪಿಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸರ ಕಾರ್ಯವೈಖರಿಗೆ ವೃದ್ಧೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…
ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…
ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…