ಹುಲುಕುಡಿ ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ: ಜಾತ್ರೆಯಲ್ಲಿ ಕಳ್ಳರ ಕೈಚಳಕ: ವೃದ್ಧೆಯ ಮೊಬೈಲ್, ಪರ್ಸ್ ಎಗರಿಸಿ ಪರಾರಿಯಾಗಲು ಯತ್ನ:‌ ಅಲ್ಲೇ ಇದ್ದ ಪೊಲೀಸ್ ಸಿಬ್ಬಂದಿ ಕಂಡು ಮೊಬೈಲ್, ಪರ್ಸ್ ಬಿಸಾಡಿ ಎಸ್ಕೇಪ್: ಮೊಬೈಲ್, ಪರ್ಸ್ ವೃದ್ಧೆಗೆ ವಾಪಸ್

ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ನಿನ್ನೆ (ಫೆ.05) ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ ನಡೆಯಿತು.

ರಥೋತ್ಸವ ಕಣ್ತುಂಬಿಕೊಳ್ಳಲು ವೃದ್ಧರು, ಮಕ್ಕಳು, ಯುವಕರು ಸೇರಿದಂತೆ ಎಲ್ಲರು ಆಗಮಿಸಿದ್ದರು. ಜನಜಂಗಳಿಯಲ್ಲಿ ಸಾರ್ವಜನಿಕ‌ ಹಿತದೃಷ್ಟಿಯಿಂದ  ಪೊಲೀಸ್ ಬಿಗಿಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಇದರ ನಡುವೆಯೂ ಕಳ್ಳರ ಕೈಚಳಕ ತೋರಿಸಲು ಯತ್ನಿಸಿದ್ದಾರೆ.

ಕಳ್ಳರು ಜಾತ್ರೆಯಲ್ಲಿ ವೃದ್ಧರನ್ನೇ ಟಾರ್ಗೆಟ್ ಮಾಡಿ, ವೃದ್ಧೆ ಬಳಿಯಿದ್ದ ಮೊಬೈಲ್ ಹಾಗೂ ಪರ್ಸ್ ನ್ನು ಎಗರಿಸಿ ಪರಾರಿಯಾಗಲು ಕಳ್ಳ ಯತ್ನಿಸಿದ್ದಾನೆ.‌ ಅಜ್ಜಿ ಇದ್ದ ಸ್ವಲ್ಪ ದೂರದಲ್ಲೇ ಪೊಲೀಸ್ ಸಿಬ್ಬಂದಿ ಇರುವುದನ್ನು ಗಮನಿಸಿದ ಕಳ್ಳ ಕಳವು ಮಾಡಿದ್ದ ಮೊಬೈಲ್, ಪರ್ಸ್ ಅಲ್ಲೇ ಎಸೆದು ಪರಾರಿಯಾಗಿದ್ದಾನೆ.

ಸದ್ಯ ಮೊಬೈಲ್ ಹಾಗೂ ಪರ್ಸ್ ನ್ನು ಪೊಲೀಸರ ವಶಕ್ಕೆ ಪಡೆದು ವೃದ್ಧೆಗೆ ಒಪ್ಪಿಸಿದ್ದಾರೆ.

ದೊಡ್ಡಬೆಳವಂಗಲ ಪೊಲೀಸರ ಕಾರ್ಯವೈಖರಿಗೆ ವೃದ್ಧೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

11 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

16 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago