ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ನಿನ್ನೆ (ಫೆ.05) ವೀರಭದ್ರಸ್ವಾಮಿ ಮತ್ತು ಪ್ರಸನ್ನ ಭದ್ರಕಾಳಮ್ಮ ರಥೋತ್ಸವ ನಡೆಯಿತು.
ರಥೋತ್ಸವ ಕಣ್ತುಂಬಿಕೊಳ್ಳಲು ವೃದ್ಧರು, ಮಕ್ಕಳು, ಯುವಕರು ಸೇರಿದಂತೆ ಎಲ್ಲರು ಆಗಮಿಸಿದ್ದರು. ಜನಜಂಗಳಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಪೊಲೀಸ್ ಬಿಗಿಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು. ಇದರ ನಡುವೆಯೂ ಕಳ್ಳರ ಕೈಚಳಕ ತೋರಿಸಲು ಯತ್ನಿಸಿದ್ದಾರೆ.
ಕಳ್ಳರು ಜಾತ್ರೆಯಲ್ಲಿ ವೃದ್ಧರನ್ನೇ ಟಾರ್ಗೆಟ್ ಮಾಡಿ, ವೃದ್ಧೆ ಬಳಿಯಿದ್ದ ಮೊಬೈಲ್ ಹಾಗೂ ಪರ್ಸ್ ನ್ನು ಎಗರಿಸಿ ಪರಾರಿಯಾಗಲು ಕಳ್ಳ ಯತ್ನಿಸಿದ್ದಾನೆ. ಅಜ್ಜಿ ಇದ್ದ ಸ್ವಲ್ಪ ದೂರದಲ್ಲೇ ಪೊಲೀಸ್ ಸಿಬ್ಬಂದಿ ಇರುವುದನ್ನು ಗಮನಿಸಿದ ಕಳ್ಳ ಕಳವು ಮಾಡಿದ್ದ ಮೊಬೈಲ್, ಪರ್ಸ್ ಅಲ್ಲೇ ಎಸೆದು ಪರಾರಿಯಾಗಿದ್ದಾನೆ.
ಸದ್ಯ ಮೊಬೈಲ್ ಹಾಗೂ ಪರ್ಸ್ ನ್ನು ಪೊಲೀಸರ ವಶಕ್ಕೆ ಪಡೆದು ವೃದ್ಧೆಗೆ ಒಪ್ಪಿಸಿದ್ದಾರೆ.
ದೊಡ್ಡಬೆಳವಂಗಲ ಪೊಲೀಸರ ಕಾರ್ಯವೈಖರಿಗೆ ವೃದ್ಧೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…