ಹುಲ್ಲಿನ ಬಣವೆಗೆ ಬೆಂಕಿ: 100ಕ್ಕೂ ಹೆಚ್ಚು ಹುಲ್ಲಿನ ಹೊರೆ ಸುಟ್ಟು ಭಸ್ಮ

ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ದೊಡ್ಡಬಳ್ಳಾಪುರದ‌ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ನಡೆದಿದೆ..

ಮುನಿರಾಜ್ ಎಂಬುವವರಿಗೆ ಸೇರಿದ 100ಕ್ಕೂ ಹೆಚ್ಚು ಹುಲ್ಲಿನ ಹೊರೆ ಸುಟ್ಟು ಭಸ್ಮವಾಗಿದೆ…

ಬೆಂಕಿ ನಂದಿಸಲು ಎಷ್ಟೇ ಹರಸಾಹಸಪಟ್ಟರು, ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಹೋಗಿದೆ.

ಅಗ್ನಿಶಾಮಕ ದಳ ಸಿಬ್ಬಂದಿ ಬರುವುದು ತಡವಾದ ಹಿನ್ನೆಲೆ ಹುಲ್ಲಿನ ಬಣವೆ ಸಂಪೂರ್ಣ ಉರಿದು ಭಸ್ಮವಾಗಿದೆ. ತಡವಾಗಿ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಕಳೆದ ಬಾರಿ ಇದೇ ರೈತನ ಮನೆಯಲ್ಲಿದ್ದ 8 ಮೆಕೆಗಳು ಕಳ್ಳತನವಾಗಿತ್ತು.ಈಗ ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಸಂಪುರ್ಣ ಭಸ್ಮವಾಗಿದ್ದು, ದಿಕ್ಕುದೋಚದ ಸ್ಥಿತಿಯಲ್ಲಿ ರೈತ ಮುನಿರಾಜು ಇದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಒಂದೇ ಒಂದು ಅಗ್ನಿಶಾಮಕ ವಾಹನ ಇರುವುದರಿಂದ ತಡವಾಯಿತು ಎಂದ ಅಗ್ನಶಾಮಕ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿಗೆ ಹೆಚ್ಚಿನ ಅಗ್ನಿಶಾಮಕ ವಾಹನಗಳನ್ನು ಒದಗಿಸುವಂತೆ ಗ್ರಾಮಸ್ಥರು ಸರ್ಕಾರಕ್ಕೆ ಆಗ್ರಹಸಿದ್ದಾರೆ.

Ramesh Babu

Journalist

Recent Posts

ಭವಿಷ್ಯದ ಸಮಾಜಕ್ಕಾಗಿ…….

ಮುಂದಿನ ಸುಮಾರು 15 ವರ್ಷಗಳಲ್ಲಿ ನಮ್ಮ ಮಕ್ಕಳ ಭವಿಷ್ಯ ಉತ್ತಮವಾಗಿರಬೇಕಾದರೆ, ಈ ಸಮಾಜ ನಾವು ಈಗಿರುವ ಪರಿಸ್ಥಿತಿಗಿಂತ ಒಳ್ಳೆಯ ಗುಣಮಟ್ಟದ…

1 hour ago

ಮಹಿಳೆಯರ ಒಳ ಉಡುಪು ಕದ್ದು ಧರಿಸುತ್ತಿದ್ದ ‘ಸೈಕೋ’ ಕಳ್ಳ ಅರೆಸ್ಟ್: ನಿಟ್ಟುಸಿರು ಬಿಟ್ಟ ಜನ

ಮಹಿಳೆಯರ ಒಳ ಉಡುಪುಗಳನ್ನು ಕದ್ದು ಧರಿಸುತ್ತಿದ್ದ ವಿಚಿತ್ರ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತ್ ಎಂಬ ಈ ಆರೋಪಿ, ರಾತ್ರಿ ವೇಳೆ…

2 hours ago

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

17 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

21 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

21 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

1 day ago