ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ದೊಡ್ಡಬಳ್ಳಾಪುರದ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ನಡೆದಿದೆ..
ಮುನಿರಾಜ್ ಎಂಬುವವರಿಗೆ ಸೇರಿದ 100ಕ್ಕೂ ಹೆಚ್ಚು ಹುಲ್ಲಿನ ಹೊರೆ ಸುಟ್ಟು ಭಸ್ಮವಾಗಿದೆ…
ಬೆಂಕಿ ನಂದಿಸಲು ಎಷ್ಟೇ ಹರಸಾಹಸಪಟ್ಟರು, ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಹೋಗಿದೆ.
ಅಗ್ನಿಶಾಮಕ ದಳ ಸಿಬ್ಬಂದಿ ಬರುವುದು ತಡವಾದ ಹಿನ್ನೆಲೆ ಹುಲ್ಲಿನ ಬಣವೆ ಸಂಪೂರ್ಣ ಉರಿದು ಭಸ್ಮವಾಗಿದೆ. ತಡವಾಗಿ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಕಳೆದ ಬಾರಿ ಇದೇ ರೈತನ ಮನೆಯಲ್ಲಿದ್ದ 8 ಮೆಕೆಗಳು ಕಳ್ಳತನವಾಗಿತ್ತು.ಈಗ ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಸಂಪುರ್ಣ ಭಸ್ಮವಾಗಿದ್ದು, ದಿಕ್ಕುದೋಚದ ಸ್ಥಿತಿಯಲ್ಲಿ ರೈತ ಮುನಿರಾಜು ಇದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಒಂದೇ ಒಂದು ಅಗ್ನಿಶಾಮಕ ವಾಹನ ಇರುವುದರಿಂದ ತಡವಾಯಿತು ಎಂದ ಅಗ್ನಶಾಮಕ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿಗೆ ಹೆಚ್ಚಿನ ಅಗ್ನಿಶಾಮಕ ವಾಹನಗಳನ್ನು ಒದಗಿಸುವಂತೆ ಗ್ರಾಮಸ್ಥರು ಸರ್ಕಾರಕ್ಕೆ ಆಗ್ರಹಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…