ಹುಲ್ಲಿನ ಬಣವೆಗೆ ಬೆಂಕಿ: 100ಕ್ಕೂ ಹೆಚ್ಚು ಹುಲ್ಲಿನ ಹೊರೆ ಸುಟ್ಟು ಭಸ್ಮ

ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಹೊತ್ತಿ ಉರಿದ ಘಟನೆ ದೊಡ್ಡಬಳ್ಳಾಪುರದ‌ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ನಡೆದಿದೆ..

ಮುನಿರಾಜ್ ಎಂಬುವವರಿಗೆ ಸೇರಿದ 100ಕ್ಕೂ ಹೆಚ್ಚು ಹುಲ್ಲಿನ ಹೊರೆ ಸುಟ್ಟು ಭಸ್ಮವಾಗಿದೆ…

ಬೆಂಕಿ ನಂದಿಸಲು ಎಷ್ಟೇ ಹರಸಾಹಸಪಟ್ಟರು, ಹುಲ್ಲಿನ ಬಣವೆ ಸಂಪೂರ್ಣ ಸುಟ್ಟು ಹೋಗಿದೆ.

ಅಗ್ನಿಶಾಮಕ ದಳ ಸಿಬ್ಬಂದಿ ಬರುವುದು ತಡವಾದ ಹಿನ್ನೆಲೆ ಹುಲ್ಲಿನ ಬಣವೆ ಸಂಪೂರ್ಣ ಉರಿದು ಭಸ್ಮವಾಗಿದೆ. ತಡವಾಗಿ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಕಳೆದ ಬಾರಿ ಇದೇ ರೈತನ ಮನೆಯಲ್ಲಿದ್ದ 8 ಮೆಕೆಗಳು ಕಳ್ಳತನವಾಗಿತ್ತು.ಈಗ ಹುಲ್ಲಿನ ಬಣವೆಗೆ ಬೆಂಕಿ ಬಿದ್ದು ಸಂಪುರ್ಣ ಭಸ್ಮವಾಗಿದ್ದು, ದಿಕ್ಕುದೋಚದ ಸ್ಥಿತಿಯಲ್ಲಿ ರೈತ ಮುನಿರಾಜು ಇದ್ದಾರೆ.

ದೊಡ್ಡಬಳ್ಳಾಪುರದಲ್ಲಿ ಒಂದೇ ಒಂದು ಅಗ್ನಿಶಾಮಕ ವಾಹನ ಇರುವುದರಿಂದ ತಡವಾಯಿತು ಎಂದ ಅಗ್ನಶಾಮಕ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕಿಗೆ ಹೆಚ್ಚಿನ ಅಗ್ನಿಶಾಮಕ ವಾಹನಗಳನ್ನು ಒದಗಿಸುವಂತೆ ಗ್ರಾಮಸ್ಥರು ಸರ್ಕಾರಕ್ಕೆ ಆಗ್ರಹಸಿದ್ದಾರೆ.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

11 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

16 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

2 days ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago