ಗೌರಿಬಿದನೂರು ನಗರದಲ್ಲಿ ಕಳ್ಳರ ಕಾಟ ಮಿತಿಮೀರಿದೆ. ಮನೆಯಲ್ಲಿ ಯಾರು ಇಲ್ಲದೆ ಇರುವ ವೇಳೆ ಮನೆಯ ಬೀಗ ಹೊಡೆದು ಮನೆಯಲ್ಲಿದ್ದ ಚಿನ್ನಭರಣ ದೋಚಿ ಎಸ್ಕೇಪ್ ಆದ ಘಟನೆ ಗೌರಿಬಿದನೂರು ನಗರ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಕರೆ ಕಲ್ಲಹಳ್ಳಿಯ ಕುವೆಂಪು ರಸ್ತೆಯಲ್ಲಿರುವ ಅನಂತ್ ಎಂಬುವವರ ಮನೆಯ ಬೀಗ ಒಡೆದು ಕಳ್ಳರು ಕೈಚಳಕ ತೋರಿಸಿರುವ ಘಟನೆ ಈಗ ನಗರ ಜನತೆಯ ನಿದ್ದೆ ಕೆಡೆಸಿದೆ.
ಇನ್ನೂ ಈ ಘಟನೆ ಗೌರಿಬಿದನೂರು ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಕಳ್ಳರ ಓಡಾಟ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ.
ಕಳ್ಳತನದ ಬಗ್ಗೆ ಮಾತನಾಡಿದ ಅನಂತ್ ಕಳೆದ ಗುರುವಾರ ಸಂಜೆ 6:00 ಗಂಟೆಗೆ ಮನೆ ಬೀಗ ಹಾಕಿಕೊಂಡು ಬೆಂಗಳೂರಿಗೆ ಹೋಗಿದ್ದೆ. ಬೆಳಗಿನ ಜಾವ 4:00 ಗಂಟೆಗೆ ಬಂದು ಬೀಗ ತೆಗೆಯಲು ಹೋಗಿದಾಗ ಬೀಗ ಇರಲಿಲ್ಲ. ಕಿಟಕಿಯಲ್ಲಿ ನೋಡಿದಾಗ ಮನೆಯ ಒಳಗಡೆ ಇದ್ದ ಬೀರು ತೆರೆದಿತ್ತು. ಬಾಕ್ಸ್ ನಲ್ಲಿ ಇದ್ದ ಸುಮಾರು 10 ಗ್ರಾಂ ಅಷ್ಟು ಒಡವೆ ಕಳ್ಳತನ ವಾಗಿರುವುದು ಬೆಳಕಿಗೆ ಬಂದಿದೆ ಎಂದರು.
ಕಳ್ಳತನ ಮಾಡಲು ಬಂದಿದ್ದ ವ್ಯಕ್ತಿ ಬೇರೆ ಮನೆಗಳ ಕಡೆ ಓಡಾಡಿರುವುದು ಸಿಸಿ ಕ್ಯಾಮೆರಾದಲ್ಲಿ ಸರಿಯಾಗಿದೆ ಈ ಘಟನೆಯಿಂದ ಸುತ್ತಮುತ್ತಲಿನ ಮನೆಯವರು ಭಯಭೀತರಾಗಿದ್ದಾರೆ. ಇನ್ನೂ ಘಟನೆಗೆ ಸಂಬಂಧಿಸಿದಂತೆ ಗೌರಿಬಿದನೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…