ಗೌರಿಬಿದನೂರು ನಗರದಲ್ಲಿ ಕಳ್ಳರ ಕಾಟ ಮಿತಿಮೀರಿದೆ. ಮನೆಯಲ್ಲಿ ಯಾರು ಇಲ್ಲದೆ ಇರುವ ವೇಳೆ ಮನೆಯ ಬೀಗ ಹೊಡೆದು ಮನೆಯಲ್ಲಿದ್ದ ಚಿನ್ನಭರಣ ದೋಚಿ ಎಸ್ಕೇಪ್ ಆದ ಘಟನೆ ಗೌರಿಬಿದನೂರು ನಗರ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಕರೆ ಕಲ್ಲಹಳ್ಳಿಯ ಕುವೆಂಪು ರಸ್ತೆಯಲ್ಲಿರುವ ಅನಂತ್ ಎಂಬುವವರ ಮನೆಯ ಬೀಗ ಒಡೆದು ಕಳ್ಳರು ಕೈಚಳಕ ತೋರಿಸಿರುವ ಘಟನೆ ಈಗ ನಗರ ಜನತೆಯ ನಿದ್ದೆ ಕೆಡೆಸಿದೆ.
ಇನ್ನೂ ಈ ಘಟನೆ ಗೌರಿಬಿದನೂರು ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಕಳ್ಳರ ಓಡಾಟ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ.
ಕಳ್ಳತನದ ಬಗ್ಗೆ ಮಾತನಾಡಿದ ಅನಂತ್ ಕಳೆದ ಗುರುವಾರ ಸಂಜೆ 6:00 ಗಂಟೆಗೆ ಮನೆ ಬೀಗ ಹಾಕಿಕೊಂಡು ಬೆಂಗಳೂರಿಗೆ ಹೋಗಿದ್ದೆ. ಬೆಳಗಿನ ಜಾವ 4:00 ಗಂಟೆಗೆ ಬಂದು ಬೀಗ ತೆಗೆಯಲು ಹೋಗಿದಾಗ ಬೀಗ ಇರಲಿಲ್ಲ. ಕಿಟಕಿಯಲ್ಲಿ ನೋಡಿದಾಗ ಮನೆಯ ಒಳಗಡೆ ಇದ್ದ ಬೀರು ತೆರೆದಿತ್ತು. ಬಾಕ್ಸ್ ನಲ್ಲಿ ಇದ್ದ ಸುಮಾರು 10 ಗ್ರಾಂ ಅಷ್ಟು ಒಡವೆ ಕಳ್ಳತನ ವಾಗಿರುವುದು ಬೆಳಕಿಗೆ ಬಂದಿದೆ ಎಂದರು.
ಕಳ್ಳತನ ಮಾಡಲು ಬಂದಿದ್ದ ವ್ಯಕ್ತಿ ಬೇರೆ ಮನೆಗಳ ಕಡೆ ಓಡಾಡಿರುವುದು ಸಿಸಿ ಕ್ಯಾಮೆರಾದಲ್ಲಿ ಸರಿಯಾಗಿದೆ ಈ ಘಟನೆಯಿಂದ ಸುತ್ತಮುತ್ತಲಿನ ಮನೆಯವರು ಭಯಭೀತರಾಗಿದ್ದಾರೆ. ಇನ್ನೂ ಘಟನೆಗೆ ಸಂಬಂಧಿಸಿದಂತೆ ಗೌರಿಬಿದನೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…