ಗೌರಿಬಿದನೂರು ನಗರದಲ್ಲಿ ಕಳ್ಳರ ಕಾಟ ಮಿತಿಮೀರಿದೆ. ಮನೆಯಲ್ಲಿ ಯಾರು ಇಲ್ಲದೆ ಇರುವ ವೇಳೆ ಮನೆಯ ಬೀಗ ಹೊಡೆದು ಮನೆಯಲ್ಲಿದ್ದ ಚಿನ್ನಭರಣ ದೋಚಿ ಎಸ್ಕೇಪ್ ಆದ ಘಟನೆ ಗೌರಿಬಿದನೂರು ನಗರ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಕರೆ ಕಲ್ಲಹಳ್ಳಿಯ ಕುವೆಂಪು ರಸ್ತೆಯಲ್ಲಿರುವ ಅನಂತ್ ಎಂಬುವವರ ಮನೆಯ ಬೀಗ ಒಡೆದು ಕಳ್ಳರು ಕೈಚಳಕ ತೋರಿಸಿರುವ ಘಟನೆ ಈಗ ನಗರ ಜನತೆಯ ನಿದ್ದೆ ಕೆಡೆಸಿದೆ.
ಇನ್ನೂ ಈ ಘಟನೆ ಗೌರಿಬಿದನೂರು ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಕಳ್ಳರ ಓಡಾಟ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ.
ಕಳ್ಳತನದ ಬಗ್ಗೆ ಮಾತನಾಡಿದ ಅನಂತ್ ಕಳೆದ ಗುರುವಾರ ಸಂಜೆ 6:00 ಗಂಟೆಗೆ ಮನೆ ಬೀಗ ಹಾಕಿಕೊಂಡು ಬೆಂಗಳೂರಿಗೆ ಹೋಗಿದ್ದೆ. ಬೆಳಗಿನ ಜಾವ 4:00 ಗಂಟೆಗೆ ಬಂದು ಬೀಗ ತೆಗೆಯಲು ಹೋಗಿದಾಗ ಬೀಗ ಇರಲಿಲ್ಲ. ಕಿಟಕಿಯಲ್ಲಿ ನೋಡಿದಾಗ ಮನೆಯ ಒಳಗಡೆ ಇದ್ದ ಬೀರು ತೆರೆದಿತ್ತು. ಬಾಕ್ಸ್ ನಲ್ಲಿ ಇದ್ದ ಸುಮಾರು 10 ಗ್ರಾಂ ಅಷ್ಟು ಒಡವೆ ಕಳ್ಳತನ ವಾಗಿರುವುದು ಬೆಳಕಿಗೆ ಬಂದಿದೆ ಎಂದರು.
ಕಳ್ಳತನ ಮಾಡಲು ಬಂದಿದ್ದ ವ್ಯಕ್ತಿ ಬೇರೆ ಮನೆಗಳ ಕಡೆ ಓಡಾಡಿರುವುದು ಸಿಸಿ ಕ್ಯಾಮೆರಾದಲ್ಲಿ ಸರಿಯಾಗಿದೆ ಈ ಘಟನೆಯಿಂದ ಸುತ್ತಮುತ್ತಲಿನ ಮನೆಯವರು ಭಯಭೀತರಾಗಿದ್ದಾರೆ. ಇನ್ನೂ ಘಟನೆಗೆ ಸಂಬಂಧಿಸಿದಂತೆ ಗೌರಿಬಿದನೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…