ಗೌರಿಬಿದನೂರು ನಗರದಲ್ಲಿ ಕಳ್ಳರ ಕಾಟ ಮಿತಿಮೀರಿದೆ. ಮನೆಯಲ್ಲಿ ಯಾರು ಇಲ್ಲದೆ ಇರುವ ವೇಳೆ ಮನೆಯ ಬೀಗ ಹೊಡೆದು ಮನೆಯಲ್ಲಿದ್ದ ಚಿನ್ನಭರಣ ದೋಚಿ ಎಸ್ಕೇಪ್ ಆದ ಘಟನೆ ಗೌರಿಬಿದನೂರು ನಗರ ವ್ಯಾಪ್ತಿಯಲ್ಲಿ ನಡೆದಿದೆ.
ನಗರದ ಕರೆ ಕಲ್ಲಹಳ್ಳಿಯ ಕುವೆಂಪು ರಸ್ತೆಯಲ್ಲಿರುವ ಅನಂತ್ ಎಂಬುವವರ ಮನೆಯ ಬೀಗ ಒಡೆದು ಕಳ್ಳರು ಕೈಚಳಕ ತೋರಿಸಿರುವ ಘಟನೆ ಈಗ ನಗರ ಜನತೆಯ ನಿದ್ದೆ ಕೆಡೆಸಿದೆ.
ಇನ್ನೂ ಈ ಘಟನೆ ಗೌರಿಬಿದನೂರು ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಕಳ್ಳರ ಓಡಾಟ ದೃಶ್ಯಗಳು ಸಿಸಿ ಟಿವಿಯಲ್ಲಿ ಸೆರೆಯಾಗಿವೆ.
ಕಳ್ಳತನದ ಬಗ್ಗೆ ಮಾತನಾಡಿದ ಅನಂತ್ ಕಳೆದ ಗುರುವಾರ ಸಂಜೆ 6:00 ಗಂಟೆಗೆ ಮನೆ ಬೀಗ ಹಾಕಿಕೊಂಡು ಬೆಂಗಳೂರಿಗೆ ಹೋಗಿದ್ದೆ. ಬೆಳಗಿನ ಜಾವ 4:00 ಗಂಟೆಗೆ ಬಂದು ಬೀಗ ತೆಗೆಯಲು ಹೋಗಿದಾಗ ಬೀಗ ಇರಲಿಲ್ಲ. ಕಿಟಕಿಯಲ್ಲಿ ನೋಡಿದಾಗ ಮನೆಯ ಒಳಗಡೆ ಇದ್ದ ಬೀರು ತೆರೆದಿತ್ತು. ಬಾಕ್ಸ್ ನಲ್ಲಿ ಇದ್ದ ಸುಮಾರು 10 ಗ್ರಾಂ ಅಷ್ಟು ಒಡವೆ ಕಳ್ಳತನ ವಾಗಿರುವುದು ಬೆಳಕಿಗೆ ಬಂದಿದೆ ಎಂದರು.
ಕಳ್ಳತನ ಮಾಡಲು ಬಂದಿದ್ದ ವ್ಯಕ್ತಿ ಬೇರೆ ಮನೆಗಳ ಕಡೆ ಓಡಾಡಿರುವುದು ಸಿಸಿ ಕ್ಯಾಮೆರಾದಲ್ಲಿ ಸರಿಯಾಗಿದೆ ಈ ಘಟನೆಯಿಂದ ಸುತ್ತಮುತ್ತಲಿನ ಮನೆಯವರು ಭಯಭೀತರಾಗಿದ್ದಾರೆ. ಇನ್ನೂ ಘಟನೆಗೆ ಸಂಬಂಧಿಸಿದಂತೆ ಗೌರಿಬಿದನೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…