ಹೊಸಕೋಟೆ ಟೌನ್ ಕುವೆಂಪು ನಗರದಲ್ಲಿ ನಿನ್ನೆ(ಡಿ.24) ರಾತ್ರಿ 2 ಗಂಟೆ ಸಮಯದಲ್ಲಿ ಕಿಟಕಿಯ ಸರಳನ್ನು ಮುರಿದು ಮನೆಯೊಂದರ ಒಳಗಡೆ ಹೋಗುವ ಪ್ರಯತ್ನ ಮಾಡಿರುತ್ತಾರೆ.
ಉತ್ತರ ಭಾರತದ ನಾಲ್ಕೈದು ಮಂದಿ ಸಂಶಯಾಸ್ಪದವಾಗಿ (ಚಡ್ಡಿ ಗ್ಯಾಂಗ್) ಕಿಟಕಿಯ ಸರಳನ್ನು ಮುರಿದು ಮನೆಯ ಒಳಗಡೆ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸಾರ್ವಜನಿಕರು ಮನೆಯನ್ನು ಬೀಗ ಹಾಕಿಕೊಂಡು ಹೊರ ಹೋಗುವಾಗ ನಗದು ಹಾಗೂ ಯಾವುದೇ ಬೆಲೆ ಬಾಳುವ ವಸ್ತುಗಳು ಮನೆಯಲ್ಲಿ ಇಡದೆ ಸುರಕ್ಷಿತವಾಗಿ ನೋಡಿಕೊಳ್ಳತಕ್ಕದ್ದು. ರಾತ್ರಿ ವೇಳೆಯಲ್ಲಿ ಯಾರೇ ಅಪರಿಚಿತರು ಬಾಗಿಲನ್ನು ತಟ್ಟಿದರೆ ಬಾಗಿಲನ್ನು ತೆಗೆಯ ಬಾರದು.
ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಕೂಡಲೇ ಹೊಸಕೋಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನಂಬರ್ – 9480802432, ಹಾಗೂ ಹೊಸಕೋಟೆ ಪೊಲೀಸ್ ಠಾಣೆ ನಂಬರ್ 080- 27931570,ಅಥವಾ 112 ನಂಬರ್ ಗೆ ಕೂಡಲೇ ಕರೆ ಮಾಡಬೇಕು ಎಂದು ಆರಕ್ಷಕ ನಿರೀಕ್ಷರು ಹೊಸಕೋಟೆ ಪೋಲಿಸ್ ಠಾಣೆ ಇವರು ಮನವಿ ಮಾಡಿದ್ದಾರೆ.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…