ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.
ಜಾತ್ರೆಯ ಅಂಗವಾಗಿ ಗ್ರಾಮದ ಶ್ರೀ ಸಪ್ಪಲಮ್ಮದೇವಿ ಮತ್ತು ಶ್ರೀ ದುರ್ಗಮ್ಮದೇವಿ ದೇವತಾ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಅಲಂಕಾರ, ಪೂಜೆ ಹಾಗೂ ಆರತಿಗಳನ್ನು ನೆರವೇರಿಸಲಾಯಿತು.
ಶ್ರೀ ಆಂಜನೇಯಸ್ವಾಮಿ ಹಾಗೂ ಶ್ರೀ ಬಸವಣ್ಣ ದೇವರಿಗೆ ಬೆಲ್ಲದ ಆರತಿ, ಶ್ರೀ ಶನಿಮಹಾತ್ಮ ಸ್ವಾಮಿಗೆ ಎಳ್ಳಾರತಿ ಬೆಳಗುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಯಿತು.
ಬಳಿಕ ಗ್ರಾಮ ದೇವತೆಗಳಾದ ಶ್ರೀ ಮುನೇಶ್ವರ, ಶ್ರೀ ದೊಡ್ಡಮ್ಮ, ಶ್ರೀ ಮಹೇಶ್ವರಮ್ಮ, ಶ್ರೀ ದುರ್ಗಮ್ಮ, ಶ್ರೀ ಸಪ್ಪಲಮ್ಮ ಹಾಗೂ ಶ್ರೀ ನಲ್ಲು ದೇವತಾ ಮೂರ್ತಿಗಳಿಗೆ ವಿಶೇಷ ಆರತಿಗಳನ್ನು ಬೆಳಗಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು ಆರತಿಗಳನ್ನು ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡು ಭಕ್ತಿ ಸಂಭ್ರಮ ಮೆರೆದರು.
ಜೂನ್ 24ರಂದು ಗ್ರಾಮ ಜಾತ್ರೆಯ ಪ್ರಮುಖ ಆಚರಣೆಗಳಾದ ಮರಿ ಹೊಡೆಯುವ ಕಾರ್ಯಕ್ರಮ ನಡೆಯಿತು. ಜೂನ್ 25ರಂದು ಮಧ್ಯಾಹ್ನ ಶ್ರೀ ಸಪ್ಪಲಮ್ಮ ಹಾಗೂ ಶ್ರೀ ದುರ್ಗಮ್ಮ ದೇವತೆಗಳ ಅದ್ದೂರಿ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಲಿದೆ.
ಸುಮಾರು 32 ವರ್ಷಗಳ ಬಳಿಕ ಗ್ರಾಮದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಗ್ರಾಮಸ್ಥರು ಹಾಗೂ ಮುಖಂಡರ ಸಹಕಾರದಿಂದ ವಿಜೃಂಭಣೆಯಿಂದ ಆಯೋಜಿಸಲಾಗಿದೆ.
ಹುಸ್ಕೂರು ಗ್ರಾಮದ ಮುಖಂಡ ಟಿ.ಆನಂದ್ ಮಾತನಾಡಿ, ಸುಮಾರು 32 ವರ್ಷಗಳ ಬಳಿಕ ಗ್ರಾಮದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಗ್ರಾಮಸ್ಥರು ಹಾಗೂ ಮುಖಂಡರ ಸಹಕಾರದಿಂದ ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಗ್ರಾಮ ಸೇರಿದಂತೆ ಎಲ್ಲೆಡೆ ಉತ್ತಮ ಮಳೆ-ಬೆಳೆ ಆಗಿ ಲೋಕ ಸುಭಿಕ್ಷವಾಗಿರಲಿ ಎಂದು ಪ್ರಾರ್ಥಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಜೆಡಿಎಸ್ ಮಾಜಿ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ ಮಾತನಾಡಿ, ಊರಹಬ್ಬಗಳು ಗ್ರಾಮದಲ್ಲಿನ ಜನರಲ್ಲಿ ಒಗ್ಗಟ್ಟು ಮೂಡಿಸಲು ಸಹಾಕರಿಯಾಗುತ್ತವೆ. ಶಕ್ತಿ ದೇವತೆಗಳ ಆರಾಧನೆಯಿಂದ ಎಲ್ಲಾ ತರಹದ ಸಂಕಷ್ಟಗಳಿಂದ ಊರು ಸುಭಿಕ್ಷವಾಗಿರಲಿದೆ ಎಂದರು.
ಈ ವೇಳೆ ಜೆಡಿಎಸ್ ಮಾಜಿ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ಗ್ರಾಮದ ಮುಖಂಡರಾದ ಟಿ.ಆನಂದ್, ಲಕ್ಷ್ಮೀಪತಿ, ಪುಟ್ಟರಾಜು, ಕುಂಟನಹಳ್ಳಿ ಮಂಜುನಾಥ, ರವಿಕುಮಾರ್ ಮತ್ತಿತ್ತರರು ಇದ್ದರು.
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…