ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.

ಜಾತ್ರೆಯ ಅಂಗವಾಗಿ ಗ್ರಾಮದ ಶ್ರೀ ಸಪ್ಪಲಮ್ಮದೇವಿ ಮತ್ತು ಶ್ರೀ ದುರ್ಗಮ್ಮದೇವಿ ದೇವತಾ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಅಲಂಕಾರ, ಪೂಜೆ ಹಾಗೂ ಆರತಿಗಳನ್ನು ನೆರವೇರಿಸಲಾಯಿತು.

 ಶ್ರೀ ಆಂಜನೇಯಸ್ವಾಮಿ ಹಾಗೂ ಶ್ರೀ ಬಸವಣ್ಣ ದೇವರಿಗೆ ಬೆಲ್ಲದ ಆರತಿ, ಶ್ರೀ ಶನಿಮಹಾತ್ಮ ಸ್ವಾಮಿಗೆ ಎಳ್ಳಾರತಿ ಬೆಳಗುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಬಳಿಕ ಗ್ರಾಮ ದೇವತೆಗಳಾದ ಶ್ರೀ ಮುನೇಶ್ವರ, ಶ್ರೀ ದೊಡ್ಡಮ್ಮ, ಶ್ರೀ ಮಹೇಶ್ವರಮ್ಮ, ಶ್ರೀ ದುರ್ಗಮ್ಮ, ಶ್ರೀ ಸಪ್ಪಲಮ್ಮ ಹಾಗೂ ಶ್ರೀ ನಲ್ಲು ದೇವತಾ ಮೂರ್ತಿಗಳಿಗೆ ವಿಶೇಷ ಆರತಿಗಳನ್ನು ಬೆಳಗಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು ಆರತಿಗಳನ್ನು ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡು ಭಕ್ತಿ ಸಂಭ್ರಮ ಮೆರೆದರು.

ಜೂನ್ 24ರಂದು ಗ್ರಾಮ ಜಾತ್ರೆಯ ಪ್ರಮುಖ ಆಚರಣೆಗಳಾದ ಮರಿ ಹೊಡೆಯುವ ಕಾರ್ಯಕ್ರಮ ನಡೆಯಿತು. ಜೂನ್ 25ರಂದು ಮಧ್ಯಾಹ್ನ ಶ್ರೀ ಸಪ್ಪಲಮ್ಮ ಹಾಗೂ ಶ್ರೀ ದುರ್ಗಮ್ಮ ದೇವತೆಗಳ ಅದ್ದೂರಿ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಲಿದೆ.

ಸುಮಾರು 32 ವರ್ಷಗಳ ಬಳಿಕ ಗ್ರಾಮದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಗ್ರಾಮಸ್ಥರು ಹಾಗೂ ಮುಖಂಡರ ಸಹಕಾರದಿಂದ ವಿಜೃಂಭಣೆಯಿಂದ ಆಯೋಜಿಸಲಾಗಿದೆ.

ಹುಸ್ಕೂರು ಗ್ರಾಮದ ಮುಖಂಡ ಟಿ.ಆನಂದ್ ಮಾತನಾಡಿ, ಸುಮಾರು 32 ವರ್ಷಗಳ ಬಳಿಕ ಗ್ರಾಮದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಗ್ರಾಮಸ್ಥರು ಹಾಗೂ ಮುಖಂಡರ ಸಹಕಾರದಿಂದ ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಗ್ರಾಮ ಸೇರಿದಂತೆ ಎಲ್ಲೆಡೆ ಉತ್ತಮ ಮಳೆ-ಬೆಳೆ ಆಗಿ ಲೋಕ ಸುಭಿಕ್ಷವಾಗಿರಲಿ ಎಂದು ಪ್ರಾರ್ಥಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ಮಾಜಿ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ ಮಾತನಾಡಿ,  ಊರಹಬ್ಬಗಳು ಗ್ರಾಮದಲ್ಲಿನ ಜನರಲ್ಲಿ ಒಗ್ಗಟ್ಟು ಮೂಡಿಸಲು ಸಹಾಕರಿಯಾಗುತ್ತವೆ. ಶಕ್ತಿ ದೇವತೆಗಳ ಆರಾಧನೆಯಿಂದ ಎಲ್ಲಾ ತರಹದ ಸಂಕಷ್ಟಗಳಿಂದ ಊರು ಸುಭಿಕ್ಷವಾಗಿರಲಿದೆ ಎಂದರು.

ಈ ವೇಳೆ ಜೆಡಿಎಸ್ ಮಾಜಿ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ಗ್ರಾಮದ ಮುಖಂಡರಾದ ಟಿ.ಆನಂದ್, ಲಕ್ಷ್ಮೀಪತಿ, ಪುಟ್ಟರಾಜು, ಕುಂಟನಹಳ್ಳಿ ಮಂಜುನಾಥ, ರವಿಕುಮಾರ್ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

15 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

3 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

4 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

4 days ago