ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.

ಜಾತ್ರೆಯ ಅಂಗವಾಗಿ ಗ್ರಾಮದ ಶ್ರೀ ಸಪ್ಪಲಮ್ಮದೇವಿ ಮತ್ತು ಶ್ರೀ ದುರ್ಗಮ್ಮದೇವಿ ದೇವತಾ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ವಿಶೇಷ ಅಲಂಕಾರ, ಪೂಜೆ ಹಾಗೂ ಆರತಿಗಳನ್ನು ನೆರವೇರಿಸಲಾಯಿತು.

 ಶ್ರೀ ಆಂಜನೇಯಸ್ವಾಮಿ ಹಾಗೂ ಶ್ರೀ ಬಸವಣ್ಣ ದೇವರಿಗೆ ಬೆಲ್ಲದ ಆರತಿ, ಶ್ರೀ ಶನಿಮಹಾತ್ಮ ಸ್ವಾಮಿಗೆ ಎಳ್ಳಾರತಿ ಬೆಳಗುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಬಳಿಕ ಗ್ರಾಮ ದೇವತೆಗಳಾದ ಶ್ರೀ ಮುನೇಶ್ವರ, ಶ್ರೀ ದೊಡ್ಡಮ್ಮ, ಶ್ರೀ ಮಹೇಶ್ವರಮ್ಮ, ಶ್ರೀ ದುರ್ಗಮ್ಮ, ಶ್ರೀ ಸಪ್ಪಲಮ್ಮ ಹಾಗೂ ಶ್ರೀ ನಲ್ಲು ದೇವತಾ ಮೂರ್ತಿಗಳಿಗೆ ವಿಶೇಷ ಆರತಿಗಳನ್ನು ಬೆಳಗಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು ಆರತಿಗಳನ್ನು ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡು ಭಕ್ತಿ ಸಂಭ್ರಮ ಮೆರೆದರು.

ಜೂನ್ 24ರಂದು ಗ್ರಾಮ ಜಾತ್ರೆಯ ಪ್ರಮುಖ ಆಚರಣೆಗಳಾದ ಮರಿ ಹೊಡೆಯುವ ಕಾರ್ಯಕ್ರಮ ನಡೆಯಿತು. ಜೂನ್ 25ರಂದು ಮಧ್ಯಾಹ್ನ ಶ್ರೀ ಸಪ್ಪಲಮ್ಮ ಹಾಗೂ ಶ್ರೀ ದುರ್ಗಮ್ಮ ದೇವತೆಗಳ ಅದ್ದೂರಿ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಲಿದೆ.

ಸುಮಾರು 32 ವರ್ಷಗಳ ಬಳಿಕ ಗ್ರಾಮದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಗ್ರಾಮಸ್ಥರು ಹಾಗೂ ಮುಖಂಡರ ಸಹಕಾರದಿಂದ ವಿಜೃಂಭಣೆಯಿಂದ ಆಯೋಜಿಸಲಾಗಿದೆ.

ಹುಸ್ಕೂರು ಗ್ರಾಮದ ಮುಖಂಡ ಟಿ.ಆನಂದ್ ಮಾತನಾಡಿ, ಸುಮಾರು 32 ವರ್ಷಗಳ ಬಳಿಕ ಗ್ರಾಮದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಗ್ರಾಮಸ್ಥರು ಹಾಗೂ ಮುಖಂಡರ ಸಹಕಾರದಿಂದ ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಗ್ರಾಮ ಸೇರಿದಂತೆ ಎಲ್ಲೆಡೆ ಉತ್ತಮ ಮಳೆ-ಬೆಳೆ ಆಗಿ ಲೋಕ ಸುಭಿಕ್ಷವಾಗಿರಲಿ ಎಂದು ಪ್ರಾರ್ಥಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಜೆಡಿಎಸ್ ಮಾಜಿ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ ಮಾತನಾಡಿ,  ಊರಹಬ್ಬಗಳು ಗ್ರಾಮದಲ್ಲಿನ ಜನರಲ್ಲಿ ಒಗ್ಗಟ್ಟು ಮೂಡಿಸಲು ಸಹಾಕರಿಯಾಗುತ್ತವೆ. ಶಕ್ತಿ ದೇವತೆಗಳ ಆರಾಧನೆಯಿಂದ ಎಲ್ಲಾ ತರಹದ ಸಂಕಷ್ಟಗಳಿಂದ ಊರು ಸುಭಿಕ್ಷವಾಗಿರಲಿದೆ ಎಂದರು.

ಈ ವೇಳೆ ಜೆಡಿಎಸ್ ಮಾಜಿ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ಗ್ರಾಮದ ಮುಖಂಡರಾದ ಟಿ.ಆನಂದ್, ಲಕ್ಷ್ಮೀಪತಿ, ಪುಟ್ಟರಾಜು, ಕುಂಟನಹಳ್ಳಿ ಮಂಜುನಾಥ, ರವಿಕುಮಾರ್ ಮತ್ತಿತ್ತರರು ಇದ್ದರು.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

13 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

17 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

18 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

1 day ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 days ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago