ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ ಗ್ರಾಮದಲ್ಲಿ ಗುರುವಾರ ಮುಂಜಾನೆ ನಡೆದಿದೆ.
ಪಚ್ಚಾರ್ಲಳ್ಳಿ ಗ್ರಾಮದ ನಾಗಮ್ಮ (45) ಮೃತ ದುರ್ದೈವಿ.
ಎಂದಿನಂತೆ ಇಂದು ಮುಂಜಾನೆ ತೋಟಕ್ಕೆ ಸುಗಂಧರಾಜ ಹೂ ಬಿಡಿಸಲು ತೆರಳಿದ್ದ ನಾಗಮ್ಮ ಅವರಿಗೆ ಹೂ ಬಿಡಿಸುವ ವೇಳೆ ಹಾವು ಕಚ್ಚಿದೆ ಎನ್ನಲಾಗಿದೆ.
ಹಾವು ಕಡಿತದಿಂದ ಅಸ್ವಸ್ಥಗೊಂಡ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಅಸುನೀಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.
ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
