ಹೃದಯಾಘಾತದಿಂದ ಪತಿ ಸಾವು: ವಿಷಯ ತಿಳಿದ ಪತ್ನಿ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ‌ ಹಾರಿ ಆತ್ಮಹತ್ಯೆಗೆ ಶರಣು

ಹೃದಯಾಘಾತದಿಂದ ಪತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಮನನೊಂದ ಪತ್ನಿ ಅಪಾರ್ಟ್‌ಮೆಂಟ್‌ನ 7ನೇ ಮಹಡಿಯಿಂದ‌ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸೋಮವಾರ ರಾತ್ರಿ ದೆಹಲಿಯ ವೈಶಾಲಿಯ ಸೆಕ್ಟರ್ -3 ರ ಅಹ್ಲ್ಕಾನ್ ಅಪಾರ್ಟ್‌ಮೆಂಟ್‌ನಲ್ಲಿರುವ ತನ್ನ 7 ನೇ ಮಹಡಿಯ ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದೆಹಲಿ ಮೃಗಾಲಯಕ್ಕೆ ಭೇಟಿ ನೀಡಿದಾಗ 25 ವರ್ಷದ ಪತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದ ನಂತರ ಅವರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ಅಂಜಲಿ ಅಹಿಲುವಾಲಿ ಎಂದು ಗುರುತಿಸಲಾಗಿದ್ದು, ಅವರು ತಮ್ಮ ಪತಿ ಅಭಿಷೇಕ್, ಅವರ ಪೋಷಕರು ಮತ್ತು ಸಹೋದರಿಯೊಂದಿಗೆ ಫ್ಲ್ಯಾಟ್ ಸಂಖ್ಯೆ 703 ರಲ್ಲಿ ವಾಸಿಸುತ್ತಿದ್ದರು.

ಮೃಗಾಲಯದಿಂದ ಮೃತ ಅಭಿಷೇಕ್ ಪಾರ್ಥಿವ ಶರೀರ ರಾತ್ರಿ 9:30 ರ ಸುಮಾರಿಗೆ ಮನೆಗೆ ಬಂದಿತು, ಅದನ್ನು ನೋಡಿದ ಅಂಜಲಿ ತನ್ನ ಮಲಗುವ ಕೋಣೆಗೆ ಬೀಗ ಹಾಕಿಕೊಂಡಿದ್ದಳು. ಇದಾದ ಕೆಲವು ನಿಮಿಷಗಳ ನಂತರ ಬಾಲ್ಕನಿಯಿಂದ ಜಿಗಿದಳು. ಕೆಳಗೆ ಶಬ್ದ ಕೇಳಿದ ನಂತರ ಭದ್ರತಾ ಸಿಬ್ಬಂದಿ ಶವವನ್ನು ಗಮನಿಸಿ ಕುಟುಂಬ ಸದಸ್ಯರಿಗೆ  ಮಾಹಿತಿ ರವಾನಿಸಿದ್ದಾರೆ.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

3 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

9 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

13 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

16 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago