ರಾಜಸ್ಥಾನದ ದೌಸಾ ಜಿಲ್ಲೆಯ ಬಂಡಿಕುಯಿ ಎಂಬಲ್ಲಿನ ಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ಬೆಳಿಗ್ಗೆ 7.30ರ ಸಮಯದಲ್ಲಿ ನಡೆದಿದೆ.
ಯತೇಂದ್ರ (16), ಹೃದಯಯಾಘಾತದಿಂದ ಸಾವನ್ನಪ್ಪಿದ ಯುವಕ. ತರಗತಿಗೆ ಪ್ರವೇಶಿಸುವ ಮುನ್ನವೇ ಕಾರಿಡಾರ್ನಲ್ಲಿ ಕುಸಿದು ಬಿದ್ದಿದ್ದಾನೆ.
ಶಾಲೆಯ ಆಡಳಿತ ಮಂಡಳಿಯವರು ತಕ್ಷಣ ಯತೇಂದ್ರನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಸರ್ಕಲ್ ಇನ್ಸ್ಪೆಕ್ಟರ್ ಪ್ರೇಮಚಂದ್ ಮಾತನಾಡಿ, ಪಂಡಿತಪುರ ರಸ್ತೆಯಲ್ಲಿರುವ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಭೂಪೇಂದ್ರ ಉಪಾಧ್ಯ ಅವರ ಪುತ್ರ ಯತೇಂದ್ರ ಶನಿವಾರ ಬೆಳಗ್ಗೆ ಹಠಾತ್ತನೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಶಾಲಾ ಸಿಬ್ಬಂದಿ ಆತನನ್ನು ಬಂಡಿಕುಯಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು, 10 ನಿಮಿಷಗಳ ಚಿಕಿತ್ಸೆ ನಂತರ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ವೈದ್ಯರ ಪ್ರಕಾರ ಯತೇಂದ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಹೇಳಿದ್ದಾರೆ.
ವರದಿಗಳ ಪ್ರಕಾರ, ಯತೇಂದ್ರ ಅವರ ಹೃದಯದಲ್ಲಿ ಬಾಲ್ಯದಿಂದಲೂ ರಂಧ್ರವಿತ್ತು, ಅದಕ್ಕಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಮೃತರ ತಂದೆ ಭೂಪೇಂದ್ರ ಉಪಾಧ್ಯಾಯ ಮಾತನಾಡಿ, ‘ಯತೇಂದ್ರ ಅವರಿಗೆ ಶುಕ್ರವಾರವಷ್ಟೇ 16 ವರ್ಷ ತುಂಬಿತು, ಶಾಲಾ ಸಹಪಾಠಿಗಳಿಗೆ ಸಿಹಿ ವಿತರಿಸಿ, ಮನೆಯಲ್ಲಿ ಕೇಕ್ ಕಟ್ ಮಾಡಿ, ಕುಟುಂಬ ಸದಸ್ಯರೊಂದಿಗೆ ತೆಗೆಸಿಕೊಂಡಿದ್ದ ಛಾಯಾಚಿತ್ರಗಳನ್ನೂ ಪಡೆದುಕೊಂಡರು. ಆದರೆ, ನಿನ್ನೆಯ ಸಂತೋಷ ಇಂದು ದುಃಖಕ್ಕೆ ತಿರುಗಿದೆ ಎಂದು ಕಣ್ಣೀರಿಟ್ಟರು.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…