ರಾಜಸ್ಥಾನದ ದೌಸಾ ಜಿಲ್ಲೆಯ ಬಂಡಿಕುಯಿ ಎಂಬಲ್ಲಿನ ಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ಬೆಳಿಗ್ಗೆ 7.30ರ ಸಮಯದಲ್ಲಿ ನಡೆದಿದೆ.
ಯತೇಂದ್ರ (16), ಹೃದಯಯಾಘಾತದಿಂದ ಸಾವನ್ನಪ್ಪಿದ ಯುವಕ. ತರಗತಿಗೆ ಪ್ರವೇಶಿಸುವ ಮುನ್ನವೇ ಕಾರಿಡಾರ್ನಲ್ಲಿ ಕುಸಿದು ಬಿದ್ದಿದ್ದಾನೆ.
ಶಾಲೆಯ ಆಡಳಿತ ಮಂಡಳಿಯವರು ತಕ್ಷಣ ಯತೇಂದ್ರನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಸರ್ಕಲ್ ಇನ್ಸ್ಪೆಕ್ಟರ್ ಪ್ರೇಮಚಂದ್ ಮಾತನಾಡಿ, ಪಂಡಿತಪುರ ರಸ್ತೆಯಲ್ಲಿರುವ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಭೂಪೇಂದ್ರ ಉಪಾಧ್ಯ ಅವರ ಪುತ್ರ ಯತೇಂದ್ರ ಶನಿವಾರ ಬೆಳಗ್ಗೆ ಹಠಾತ್ತನೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಶಾಲಾ ಸಿಬ್ಬಂದಿ ಆತನನ್ನು ಬಂಡಿಕುಯಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು, 10 ನಿಮಿಷಗಳ ಚಿಕಿತ್ಸೆ ನಂತರ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ವೈದ್ಯರ ಪ್ರಕಾರ ಯತೇಂದ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಹೇಳಿದ್ದಾರೆ.
ವರದಿಗಳ ಪ್ರಕಾರ, ಯತೇಂದ್ರ ಅವರ ಹೃದಯದಲ್ಲಿ ಬಾಲ್ಯದಿಂದಲೂ ರಂಧ್ರವಿತ್ತು, ಅದಕ್ಕಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಮೃತರ ತಂದೆ ಭೂಪೇಂದ್ರ ಉಪಾಧ್ಯಾಯ ಮಾತನಾಡಿ, ‘ಯತೇಂದ್ರ ಅವರಿಗೆ ಶುಕ್ರವಾರವಷ್ಟೇ 16 ವರ್ಷ ತುಂಬಿತು, ಶಾಲಾ ಸಹಪಾಠಿಗಳಿಗೆ ಸಿಹಿ ವಿತರಿಸಿ, ಮನೆಯಲ್ಲಿ ಕೇಕ್ ಕಟ್ ಮಾಡಿ, ಕುಟುಂಬ ಸದಸ್ಯರೊಂದಿಗೆ ತೆಗೆಸಿಕೊಂಡಿದ್ದ ಛಾಯಾಚಿತ್ರಗಳನ್ನೂ ಪಡೆದುಕೊಂಡರು. ಆದರೆ, ನಿನ್ನೆಯ ಸಂತೋಷ ಇಂದು ದುಃಖಕ್ಕೆ ತಿರುಗಿದೆ ಎಂದು ಕಣ್ಣೀರಿಟ್ಟರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…