ರಾಜಸ್ಥಾನದ ದೌಸಾ ಜಿಲ್ಲೆಯ ಬಂಡಿಕುಯಿ ಎಂಬಲ್ಲಿನ ಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ ದಾರುಣ ಘಟನೆ ಶನಿವಾರ ಬೆಳಿಗ್ಗೆ 7.30ರ ಸಮಯದಲ್ಲಿ ನಡೆದಿದೆ.
ಯತೇಂದ್ರ (16), ಹೃದಯಯಾಘಾತದಿಂದ ಸಾವನ್ನಪ್ಪಿದ ಯುವಕ. ತರಗತಿಗೆ ಪ್ರವೇಶಿಸುವ ಮುನ್ನವೇ ಕಾರಿಡಾರ್ನಲ್ಲಿ ಕುಸಿದು ಬಿದ್ದಿದ್ದಾನೆ.
ಶಾಲೆಯ ಆಡಳಿತ ಮಂಡಳಿಯವರು ತಕ್ಷಣ ಯತೇಂದ್ರನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ಸರ್ಕಲ್ ಇನ್ಸ್ಪೆಕ್ಟರ್ ಪ್ರೇಮಚಂದ್ ಮಾತನಾಡಿ, ಪಂಡಿತಪುರ ರಸ್ತೆಯಲ್ಲಿರುವ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ಭೂಪೇಂದ್ರ ಉಪಾಧ್ಯ ಅವರ ಪುತ್ರ ಯತೇಂದ್ರ ಶನಿವಾರ ಬೆಳಗ್ಗೆ ಹಠಾತ್ತನೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ಶಾಲಾ ಸಿಬ್ಬಂದಿ ಆತನನ್ನು ಬಂಡಿಕುಯಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು, 10 ನಿಮಿಷಗಳ ಚಿಕಿತ್ಸೆ ನಂತರ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ವೈದ್ಯರ ಪ್ರಕಾರ ಯತೇಂದ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಹೇಳಿದ್ದಾರೆ.
ವರದಿಗಳ ಪ್ರಕಾರ, ಯತೇಂದ್ರ ಅವರ ಹೃದಯದಲ್ಲಿ ಬಾಲ್ಯದಿಂದಲೂ ರಂಧ್ರವಿತ್ತು, ಅದಕ್ಕಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.
ಮೃತರ ತಂದೆ ಭೂಪೇಂದ್ರ ಉಪಾಧ್ಯಾಯ ಮಾತನಾಡಿ, ‘ಯತೇಂದ್ರ ಅವರಿಗೆ ಶುಕ್ರವಾರವಷ್ಟೇ 16 ವರ್ಷ ತುಂಬಿತು, ಶಾಲಾ ಸಹಪಾಠಿಗಳಿಗೆ ಸಿಹಿ ವಿತರಿಸಿ, ಮನೆಯಲ್ಲಿ ಕೇಕ್ ಕಟ್ ಮಾಡಿ, ಕುಟುಂಬ ಸದಸ್ಯರೊಂದಿಗೆ ತೆಗೆಸಿಕೊಂಡಿದ್ದ ಛಾಯಾಚಿತ್ರಗಳನ್ನೂ ಪಡೆದುಕೊಂಡರು. ಆದರೆ, ನಿನ್ನೆಯ ಸಂತೋಷ ಇಂದು ದುಃಖಕ್ಕೆ ತಿರುಗಿದೆ ಎಂದು ಕಣ್ಣೀರಿಟ್ಟರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…