ಬೆಂಗಳೂರು, ವೈಟ್ಫೀಲ್ಡ್, : 5ನೇ ವಯಸ್ಸಿನಲ್ಲಿ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದ 28 ವರ್ಷದ ಯುವಕನು ಜೀವನವಿಡೀ ದುರ್ಬಲ ಹೃದಯದೊಂದಿಗೆ ಬದುಕುತ್ತಿದ್ದು, ಕಳೆದ ಮೂರು ತಿಂಗಳಿಂದ ಹೊಟ್ಟೆನೋವು ಕಾಡುತ್ತಿದ್ದಾಗ, ಪರೀಕ್ಷೆ ನಡೆಸಿದಾಗ ಪಿತ್ತಕೋಶದ ಕ್ಯಾನ್ಸರ್ ಇರೋದು ದೃಢಪಟ್ಟಿತು.
ಹೊಟ್ಟೆನೋವೆಂದು ಮೆಡಿಕವರ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮನಿಯನ್ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಶುರು ಮಾಡಿದಾಗ ಪಿತ್ತಕೋಶದ ಕ್ಯಾನ್ಸರ್ ಇರೋದು ಧೃಢಪಟ್ಟಿತ್ತು. ಆದರೆ ರೋಬೋಟಿಕ್ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ ಶಸ್ತ್ರಚಿಕಿತ್ಸೆ ಮಾಡೋದು ಸ್ವಲ್ಪ ರಿಸ್ಕಿ ಇತ್ತು
ಯಾಕೆಂದರೆ ಯುವಕನಿಗೆ 5 ವರ್ಷ ಇರುವಾಗ ಹೃದಯದ ಸರ್ಜರಿ ನಡೆದಿತ್ತು. ರೋಗಿಯ ಹೃದಯ ಸ್ಥಿತಿ ದುರ್ಬಲವಾಗಿದ್ದರಿಂದ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಹೃದಯ ವೈಫಲ್ಯ, ಅಧಿಕ ರಕ್ತಸ್ರಾವ ,ಹೃದಯಾಘಾತ ಮತ್ತು ಜೀವಕ್ಕೆ ಅಪಾಯ ಉಂಟಾಗುವ ಭೀತಿ ತೀವ್ರವಾಗಿತ್ತು.
ಆದರೂ ಮೆಡಿಕವರ್ ಆಸ್ಪತ್ರೆಯ ಡಾ. ಕೌಶಿಕ್ ಸುಬ್ರಮನಿಯನ್ ನೇತೃತ್ವದ ವೈದ್ಯರ ತಂಡ ಸವಾಲನ್ನು ಸ್ವೀಕರಿಸಿತು. ರೋಬೋಟಿಕ್ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು.
ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಪ್ರತಿಯೊಂದು ಕ್ಷಣವೂ ಒತ್ತಡದಿಂದ ಕೂಡಿತ್ತು. ಆದರೆ ಅತ್ಯಾಧುನಿಕ ರೋಬೋಟಿಕ್ ತಂತ್ರಜ್ಞಾನ ಮತ್ತು ವೈದ್ಯರ ಅನುಭವದಿಂದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿತು.
ಡಾ. ಕೌಶಿಕ್ ಸುಬ್ರಮನಿಯನ್ ಹೇಳಿದರು:
“ಇದು ಕೇವಲ ಪಿತ್ತಕೋಶದ ಶಸ್ತ್ರಚಿಕಿತ್ಸೆಯಲ್ಲ, ದುರ್ಬಲ ಹೃದಯದ ಭಯದೊಂದಿಗೆ ಬದುಕುತ್ತಿದ್ದ ಯುವಕನಿಗೆ ಹೊಸ ಭರವಸೆ ನೀಡಿದ ಶಸ್ತ್ರಚಿಕಿತ್ಸೆ. ರೋಬೋಟಿಕ್ ತಂತ್ರಜ್ಞಾನದಿಂದ ಇದು ಸುರಕ್ಷಿತವಾಗಿ ನೆರವೇರಿತು.”
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…
ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…
ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್ನ ಮೆಡ್ಚಲ್ ಪ್ರದೇಶದಲ್ಲಿ…
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…