ಬೆಂಗಳೂರು, ವೈಟ್ಫೀಲ್ಡ್, : 5ನೇ ವಯಸ್ಸಿನಲ್ಲಿ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದ 28 ವರ್ಷದ ಯುವಕನು ಜೀವನವಿಡೀ ದುರ್ಬಲ ಹೃದಯದೊಂದಿಗೆ ಬದುಕುತ್ತಿದ್ದು, ಕಳೆದ ಮೂರು ತಿಂಗಳಿಂದ ಹೊಟ್ಟೆನೋವು ಕಾಡುತ್ತಿದ್ದಾಗ, ಪರೀಕ್ಷೆ ನಡೆಸಿದಾಗ ಪಿತ್ತಕೋಶದ ಕ್ಯಾನ್ಸರ್ ಇರೋದು ದೃಢಪಟ್ಟಿತು.
ಹೊಟ್ಟೆನೋವೆಂದು ಮೆಡಿಕವರ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮನಿಯನ್ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಶುರು ಮಾಡಿದಾಗ ಪಿತ್ತಕೋಶದ ಕ್ಯಾನ್ಸರ್ ಇರೋದು ಧೃಢಪಟ್ಟಿತ್ತು. ಆದರೆ ರೋಬೋಟಿಕ್ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ ಶಸ್ತ್ರಚಿಕಿತ್ಸೆ ಮಾಡೋದು ಸ್ವಲ್ಪ ರಿಸ್ಕಿ ಇತ್ತು
ಯಾಕೆಂದರೆ ಯುವಕನಿಗೆ 5 ವರ್ಷ ಇರುವಾಗ ಹೃದಯದ ಸರ್ಜರಿ ನಡೆದಿತ್ತು. ರೋಗಿಯ ಹೃದಯ ಸ್ಥಿತಿ ದುರ್ಬಲವಾಗಿದ್ದರಿಂದ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಹೃದಯ ವೈಫಲ್ಯ, ಅಧಿಕ ರಕ್ತಸ್ರಾವ ,ಹೃದಯಾಘಾತ ಮತ್ತು ಜೀವಕ್ಕೆ ಅಪಾಯ ಉಂಟಾಗುವ ಭೀತಿ ತೀವ್ರವಾಗಿತ್ತು.
ಆದರೂ ಮೆಡಿಕವರ್ ಆಸ್ಪತ್ರೆಯ ಡಾ. ಕೌಶಿಕ್ ಸುಬ್ರಮನಿಯನ್ ನೇತೃತ್ವದ ವೈದ್ಯರ ತಂಡ ಸವಾಲನ್ನು ಸ್ವೀಕರಿಸಿತು. ರೋಬೋಟಿಕ್ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು.
ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಪ್ರತಿಯೊಂದು ಕ್ಷಣವೂ ಒತ್ತಡದಿಂದ ಕೂಡಿತ್ತು. ಆದರೆ ಅತ್ಯಾಧುನಿಕ ರೋಬೋಟಿಕ್ ತಂತ್ರಜ್ಞಾನ ಮತ್ತು ವೈದ್ಯರ ಅನುಭವದಿಂದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿತು.
ಡಾ. ಕೌಶಿಕ್ ಸುಬ್ರಮನಿಯನ್ ಹೇಳಿದರು:
“ಇದು ಕೇವಲ ಪಿತ್ತಕೋಶದ ಶಸ್ತ್ರಚಿಕಿತ್ಸೆಯಲ್ಲ, ದುರ್ಬಲ ಹೃದಯದ ಭಯದೊಂದಿಗೆ ಬದುಕುತ್ತಿದ್ದ ಯುವಕನಿಗೆ ಹೊಸ ಭರವಸೆ ನೀಡಿದ ಶಸ್ತ್ರಚಿಕಿತ್ಸೆ. ರೋಬೋಟಿಕ್ ತಂತ್ರಜ್ಞಾನದಿಂದ ಇದು ಸುರಕ್ಷಿತವಾಗಿ ನೆರವೇರಿತು.”
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…
ಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಬೆಂಬಲಿತ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಅವರು ನೂತನ ಉಪರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಉಪರಾಷ್ಟ್ರಪತಿ…
ದೊಡ್ಡಬಳ್ಳಾಪುರ : 40 ಕೋಟಿ ಮೌಲ್ಯದ ಸರ್ಕಾರಿ ಆಸ್ತಿಯನ್ನ ಸರ್ಕಾರದ ವಶಕ್ಕೆ ಪಡೆದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ ಬಸವರಾಜುರವರ…
ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರು ಅನುಭವಿ, ಹಿರಿಯ ರಾಜಕಾರಣಿ. ಕೇಂದ್ರ, ರಾಜ್ಯ…
ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸೌಕರ್ಯಗಳು…
ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ನಡೆದ ದುರಂತ ಘಟನೆಯಲ್ಲಿ, ಮರ ಕುಸಿದು ಬಿದ್ದ ಪರಿಣಾಮ ಐದು ತಿಂಗಳ ಗರ್ಭಿಣಿ ಸಾವಿತ್ರಿ…