ಬೆಂಗಳೂರು, ವೈಟ್ಫೀಲ್ಡ್, : 5ನೇ ವಯಸ್ಸಿನಲ್ಲಿ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದ 28 ವರ್ಷದ ಯುವಕನು ಜೀವನವಿಡೀ ದುರ್ಬಲ ಹೃದಯದೊಂದಿಗೆ ಬದುಕುತ್ತಿದ್ದು, ಕಳೆದ ಮೂರು ತಿಂಗಳಿಂದ ಹೊಟ್ಟೆನೋವು ಕಾಡುತ್ತಿದ್ದಾಗ, ಪರೀಕ್ಷೆ ನಡೆಸಿದಾಗ ಪಿತ್ತಕೋಶದ ಕ್ಯಾನ್ಸರ್ ಇರೋದು ದೃಢಪಟ್ಟಿತು.
ಹೊಟ್ಟೆನೋವೆಂದು ಮೆಡಿಕವರ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮನಿಯನ್ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಶುರು ಮಾಡಿದಾಗ ಪಿತ್ತಕೋಶದ ಕ್ಯಾನ್ಸರ್ ಇರೋದು ಧೃಢಪಟ್ಟಿತ್ತು. ಆದರೆ ರೋಬೋಟಿಕ್ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ ಶಸ್ತ್ರಚಿಕಿತ್ಸೆ ಮಾಡೋದು ಸ್ವಲ್ಪ ರಿಸ್ಕಿ ಇತ್ತು
ಯಾಕೆಂದರೆ ಯುವಕನಿಗೆ 5 ವರ್ಷ ಇರುವಾಗ ಹೃದಯದ ಸರ್ಜರಿ ನಡೆದಿತ್ತು. ರೋಗಿಯ ಹೃದಯ ಸ್ಥಿತಿ ದುರ್ಬಲವಾಗಿದ್ದರಿಂದ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಹೃದಯ ವೈಫಲ್ಯ, ಅಧಿಕ ರಕ್ತಸ್ರಾವ ,ಹೃದಯಾಘಾತ ಮತ್ತು ಜೀವಕ್ಕೆ ಅಪಾಯ ಉಂಟಾಗುವ ಭೀತಿ ತೀವ್ರವಾಗಿತ್ತು.
ಆದರೂ ಮೆಡಿಕವರ್ ಆಸ್ಪತ್ರೆಯ ಡಾ. ಕೌಶಿಕ್ ಸುಬ್ರಮನಿಯನ್ ನೇತೃತ್ವದ ವೈದ್ಯರ ತಂಡ ಸವಾಲನ್ನು ಸ್ವೀಕರಿಸಿತು. ರೋಬೋಟಿಕ್ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು.
ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಪ್ರತಿಯೊಂದು ಕ್ಷಣವೂ ಒತ್ತಡದಿಂದ ಕೂಡಿತ್ತು. ಆದರೆ ಅತ್ಯಾಧುನಿಕ ರೋಬೋಟಿಕ್ ತಂತ್ರಜ್ಞಾನ ಮತ್ತು ವೈದ್ಯರ ಅನುಭವದಿಂದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿತು.
ಡಾ. ಕೌಶಿಕ್ ಸುಬ್ರಮನಿಯನ್ ಹೇಳಿದರು:
“ಇದು ಕೇವಲ ಪಿತ್ತಕೋಶದ ಶಸ್ತ್ರಚಿಕಿತ್ಸೆಯಲ್ಲ, ದುರ್ಬಲ ಹೃದಯದ ಭಯದೊಂದಿಗೆ ಬದುಕುತ್ತಿದ್ದ ಯುವಕನಿಗೆ ಹೊಸ ಭರವಸೆ ನೀಡಿದ ಶಸ್ತ್ರಚಿಕಿತ್ಸೆ. ರೋಬೋಟಿಕ್ ತಂತ್ರಜ್ಞಾನದಿಂದ ಇದು ಸುರಕ್ಷಿತವಾಗಿ ನೆರವೇರಿತು.”
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…