ಹೃದಯ ದುರ್ಬಲ – ಶಸ್ತ್ರಚಿಕಿತ್ಸೆ ಅಸಾಧ್ಯ ಎನಿಸಿತ್ತು; ಅಸಾಧ್ಯವಾಗಿದ್ದನ್ನು ಸಾಧಿಸಿ ರೋಗಿಗೆ ಮರುಜೀವ ನೀಡಿದ ವೈದ್ಯರು

ಬೆಂಗಳೂರು, ವೈಟ್‌ಫೀಲ್ಡ್, : 5ನೇ ವಯಸ್ಸಿನಲ್ಲಿ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದ 28 ವರ್ಷದ ಯುವಕನು ಜೀವನವಿಡೀ ದುರ್ಬಲ ಹೃದಯದೊಂದಿಗೆ ಬದುಕುತ್ತಿದ್ದು, ಕಳೆದ ಮೂರು ತಿಂಗಳಿಂದ ಹೊಟ್ಟೆನೋವು ಕಾಡುತ್ತಿದ್ದಾಗ, ಪರೀಕ್ಷೆ ನಡೆಸಿದಾಗ ಪಿತ್ತಕೋಶದ ಕ್ಯಾನ್ಸರ್ ಇರೋದು ದೃಢಪಟ್ಟಿತು.

ಹೊಟ್ಟೆನೋವೆಂದು ಮೆಡಿಕವರ್‌ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮನಿಯನ್ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಶುರು ಮಾಡಿದಾಗ ಪಿತ್ತಕೋಶದ ಕ್ಯಾನ್ಸರ್‌ ಇರೋದು ಧೃಢಪಟ್ಟಿತ್ತು. ಆದರೆ ರೋಬೋಟಿಕ್ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ ಶಸ್ತ್ರಚಿಕಿತ್ಸೆ ಮಾಡೋದು ಸ್ವಲ್ಪ ರಿಸ್ಕಿ ಇತ್ತು

ಯಾಕೆಂದರೆ ಯುವಕನಿಗೆ 5 ವರ್ಷ ಇರುವಾಗ ಹೃದಯದ ಸರ್ಜರಿ ನಡೆದಿತ್ತು. ರೋಗಿಯ ಹೃದಯ ಸ್ಥಿತಿ ದುರ್ಬಲವಾಗಿದ್ದರಿಂದ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಹೃದಯ ವೈಫಲ್ಯ, ಅಧಿಕ ರಕ್ತಸ್ರಾವ ,ಹೃದಯಾಘಾತ ಮತ್ತು ಜೀವಕ್ಕೆ ಅಪಾಯ ಉಂಟಾಗುವ ಭೀತಿ ತೀವ್ರವಾಗಿತ್ತು.

ಆದರೂ ಮೆಡಿಕವರ್ ಆಸ್ಪತ್ರೆಯ ಡಾ. ಕೌಶಿಕ್ ಸುಬ್ರಮನಿಯನ್ ನೇತೃತ್ವದ ವೈದ್ಯರ ತಂಡ ಸವಾಲನ್ನು ಸ್ವೀಕರಿಸಿತು. ರೋಬೋಟಿಕ್ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು.

ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಪ್ರತಿಯೊಂದು ಕ್ಷಣವೂ ಒತ್ತಡದಿಂದ ಕೂಡಿತ್ತು. ಆದರೆ ಅತ್ಯಾಧುನಿಕ ರೋಬೋಟಿಕ್ ತಂತ್ರಜ್ಞಾನ ಮತ್ತು ವೈದ್ಯರ ಅನುಭವದಿಂದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿತು.

ಡಾ. ಕೌಶಿಕ್ ಸುಬ್ರಮನಿಯನ್ ಹೇಳಿದರು:
“ಇದು ಕೇವಲ ಪಿತ್ತಕೋಶದ ಶಸ್ತ್ರಚಿಕಿತ್ಸೆಯಲ್ಲ, ದುರ್ಬಲ ಹೃದಯದ ಭಯದೊಂದಿಗೆ ಬದುಕುತ್ತಿದ್ದ ಯುವಕನಿಗೆ ಹೊಸ ಭರವಸೆ ನೀಡಿದ ಶಸ್ತ್ರಚಿಕಿತ್ಸೆ. ರೋಬೋಟಿಕ್ ತಂತ್ರಜ್ಞಾನದಿಂದ ಇದು ಸುರಕ್ಷಿತವಾಗಿ ನೆರವೇರಿತು.”

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

7 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

24 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago