ಹೃದಯ ದುರ್ಬಲ – ಶಸ್ತ್ರಚಿಕಿತ್ಸೆ ಅಸಾಧ್ಯ ಎನಿಸಿತ್ತು; ಅಸಾಧ್ಯವಾಗಿದ್ದನ್ನು ಸಾಧಿಸಿ ರೋಗಿಗೆ ಮರುಜೀವ ನೀಡಿದ ವೈದ್ಯರು

ಬೆಂಗಳೂರು, ವೈಟ್‌ಫೀಲ್ಡ್, : 5ನೇ ವಯಸ್ಸಿನಲ್ಲಿ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದ 28 ವರ್ಷದ ಯುವಕನು ಜೀವನವಿಡೀ ದುರ್ಬಲ ಹೃದಯದೊಂದಿಗೆ ಬದುಕುತ್ತಿದ್ದು, ಕಳೆದ ಮೂರು ತಿಂಗಳಿಂದ ಹೊಟ್ಟೆನೋವು ಕಾಡುತ್ತಿದ್ದಾಗ, ಪರೀಕ್ಷೆ ನಡೆಸಿದಾಗ ಪಿತ್ತಕೋಶದ ಕ್ಯಾನ್ಸರ್ ಇರೋದು ದೃಢಪಟ್ಟಿತು.

ಹೊಟ್ಟೆನೋವೆಂದು ಮೆಡಿಕವರ್‌ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮನಿಯನ್ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಶುರು ಮಾಡಿದಾಗ ಪಿತ್ತಕೋಶದ ಕ್ಯಾನ್ಸರ್‌ ಇರೋದು ಧೃಢಪಟ್ಟಿತ್ತು. ಆದರೆ ರೋಬೋಟಿಕ್ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ ಶಸ್ತ್ರಚಿಕಿತ್ಸೆ ಮಾಡೋದು ಸ್ವಲ್ಪ ರಿಸ್ಕಿ ಇತ್ತು

ಯಾಕೆಂದರೆ ಯುವಕನಿಗೆ 5 ವರ್ಷ ಇರುವಾಗ ಹೃದಯದ ಸರ್ಜರಿ ನಡೆದಿತ್ತು. ರೋಗಿಯ ಹೃದಯ ಸ್ಥಿತಿ ದುರ್ಬಲವಾಗಿದ್ದರಿಂದ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಹೃದಯ ವೈಫಲ್ಯ, ಅಧಿಕ ರಕ್ತಸ್ರಾವ ,ಹೃದಯಾಘಾತ ಮತ್ತು ಜೀವಕ್ಕೆ ಅಪಾಯ ಉಂಟಾಗುವ ಭೀತಿ ತೀವ್ರವಾಗಿತ್ತು.

ಆದರೂ ಮೆಡಿಕವರ್ ಆಸ್ಪತ್ರೆಯ ಡಾ. ಕೌಶಿಕ್ ಸುಬ್ರಮನಿಯನ್ ನೇತೃತ್ವದ ವೈದ್ಯರ ತಂಡ ಸವಾಲನ್ನು ಸ್ವೀಕರಿಸಿತು. ರೋಬೋಟಿಕ್ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು.

ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಪ್ರತಿಯೊಂದು ಕ್ಷಣವೂ ಒತ್ತಡದಿಂದ ಕೂಡಿತ್ತು. ಆದರೆ ಅತ್ಯಾಧುನಿಕ ರೋಬೋಟಿಕ್ ತಂತ್ರಜ್ಞಾನ ಮತ್ತು ವೈದ್ಯರ ಅನುಭವದಿಂದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿತು.

ಡಾ. ಕೌಶಿಕ್ ಸುಬ್ರಮನಿಯನ್ ಹೇಳಿದರು:
“ಇದು ಕೇವಲ ಪಿತ್ತಕೋಶದ ಶಸ್ತ್ರಚಿಕಿತ್ಸೆಯಲ್ಲ, ದುರ್ಬಲ ಹೃದಯದ ಭಯದೊಂದಿಗೆ ಬದುಕುತ್ತಿದ್ದ ಯುವಕನಿಗೆ ಹೊಸ ಭರವಸೆ ನೀಡಿದ ಶಸ್ತ್ರಚಿಕಿತ್ಸೆ. ರೋಬೋಟಿಕ್ ತಂತ್ರಜ್ಞಾನದಿಂದ ಇದು ಸುರಕ್ಷಿತವಾಗಿ ನೆರವೇರಿತು.”

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

12 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago