ಬೆಂಗಳೂರು, ವೈಟ್ಫೀಲ್ಡ್, : 5ನೇ ವಯಸ್ಸಿನಲ್ಲಿ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದ 28 ವರ್ಷದ ಯುವಕನು ಜೀವನವಿಡೀ ದುರ್ಬಲ ಹೃದಯದೊಂದಿಗೆ ಬದುಕುತ್ತಿದ್ದು, ಕಳೆದ ಮೂರು ತಿಂಗಳಿಂದ ಹೊಟ್ಟೆನೋವು ಕಾಡುತ್ತಿದ್ದಾಗ, ಪರೀಕ್ಷೆ ನಡೆಸಿದಾಗ ಪಿತ್ತಕೋಶದ ಕ್ಯಾನ್ಸರ್ ಇರೋದು ದೃಢಪಟ್ಟಿತು.
ಹೊಟ್ಟೆನೋವೆಂದು ಮೆಡಿಕವರ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ. ಕೌಶಿಕ್ ಸುಬ್ರಮನಿಯನ್ ಅವರನ್ನು ಭೇಟಿ ಮಾಡಿ ಚಿಕಿತ್ಸೆ ಶುರು ಮಾಡಿದಾಗ ಪಿತ್ತಕೋಶದ ಕ್ಯಾನ್ಸರ್ ಇರೋದು ಧೃಢಪಟ್ಟಿತ್ತು. ಆದರೆ ರೋಬೋಟಿಕ್ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ ಶಸ್ತ್ರಚಿಕಿತ್ಸೆ ಮಾಡೋದು ಸ್ವಲ್ಪ ರಿಸ್ಕಿ ಇತ್ತು
ಯಾಕೆಂದರೆ ಯುವಕನಿಗೆ 5 ವರ್ಷ ಇರುವಾಗ ಹೃದಯದ ಸರ್ಜರಿ ನಡೆದಿತ್ತು. ರೋಗಿಯ ಹೃದಯ ಸ್ಥಿತಿ ದುರ್ಬಲವಾಗಿದ್ದರಿಂದ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಹೃದಯ ವೈಫಲ್ಯ, ಅಧಿಕ ರಕ್ತಸ್ರಾವ ,ಹೃದಯಾಘಾತ ಮತ್ತು ಜೀವಕ್ಕೆ ಅಪಾಯ ಉಂಟಾಗುವ ಭೀತಿ ತೀವ್ರವಾಗಿತ್ತು.
ಆದರೂ ಮೆಡಿಕವರ್ ಆಸ್ಪತ್ರೆಯ ಡಾ. ಕೌಶಿಕ್ ಸುಬ್ರಮನಿಯನ್ ನೇತೃತ್ವದ ವೈದ್ಯರ ತಂಡ ಸವಾಲನ್ನು ಸ್ವೀಕರಿಸಿತು. ರೋಬೋಟಿಕ್ ರ್ಯಾಡಿಕಲ್ ಕೊಲೆಸಿಸ್ಟೆಕ್ಟಮಿ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು.
ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಪ್ರತಿಯೊಂದು ಕ್ಷಣವೂ ಒತ್ತಡದಿಂದ ಕೂಡಿತ್ತು. ಆದರೆ ಅತ್ಯಾಧುನಿಕ ರೋಬೋಟಿಕ್ ತಂತ್ರಜ್ಞಾನ ಮತ್ತು ವೈದ್ಯರ ಅನುಭವದಿಂದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿತು.
ಡಾ. ಕೌಶಿಕ್ ಸುಬ್ರಮನಿಯನ್ ಹೇಳಿದರು:
“ಇದು ಕೇವಲ ಪಿತ್ತಕೋಶದ ಶಸ್ತ್ರಚಿಕಿತ್ಸೆಯಲ್ಲ, ದುರ್ಬಲ ಹೃದಯದ ಭಯದೊಂದಿಗೆ ಬದುಕುತ್ತಿದ್ದ ಯುವಕನಿಗೆ ಹೊಸ ಭರವಸೆ ನೀಡಿದ ಶಸ್ತ್ರಚಿಕಿತ್ಸೆ. ರೋಬೋಟಿಕ್ ತಂತ್ರಜ್ಞಾನದಿಂದ ಇದು ಸುರಕ್ಷಿತವಾಗಿ ನೆರವೇರಿತು.”
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ…
ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…
ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…