ಗಂಡ ಹೆಂಡತಿ ಜಗಳ ಉಂಡು ಮಲಗೋ ವರೆಗೆ ಅಂತಾ ಇರಬೇಕು. ಆದರೆ ಕೆಲವೊಂದು ಬಾರಿ ಗಂಡ ಹೆಂಡತಿ ಜಗಳ ಮಿತಿ ಮೀರಿದರೆ ಒಂದೊಂದು ಸಲ ಏನ್ ಆಗುತ್ತೋ ಅನ್ನೋದು ಊಹೆಗೆ ಸಿಕ್ಕುವುದಿಲ್ಲ. ಗಂಡ ಹೆಂಡತಿ ಜಗಳ ಮಾಡಿಕೊಳ್ಳುವ ಮುನ್ನ ಒಂದು ಸಲ ಅಲೋಚನೆ ಮಾಡಬೇಕು. ಆದ್ರೆ ಇಲ್ಲೊಂದು ಜೋಡಿ ಯಾವುದು ಯೋಚನೆ ಮಾಡ್ದೆ ದೊಡ್ಡದೊಂದು ಅನಾಚಾರ ನಡೆದು ಹೋಗಿದೆ..
ಸತ್ತು ಮಲಗಿರುವ ಗಂಡ.. ರಕ್ತದ ಮಡುವಿನಲ್ಲಿ ಬಿದ್ದಿರುವ ಹೆಂಡತಿ.. ಘಟನೆ ಸ್ಥಳದಲ್ಲಿ ಇಂಚು ಇಂಚು ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು…. ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ಕಂಡು ಬಂದಿದ್ದು..
ಹೌದು ಗಂಡ ಮೊದಲು ಹೆಂಡತಿಯನ್ನ ಜಿಮ್ ಡಂಬಲ್ಸ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ ನಂತರ ಕಾರಣಾಂತರಗಳಿಂದ ಗಂಡ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಜಯಪುರ ಪಟ್ಟಣದ ಬಸವಚಾರಿ ಅಲಿಯಾಸ್ ಶಾಮ್ (40) ಮತ್ತು ಸುಮಾ (35) ಮೃತ ದುರ್ದೈವಿಗಳು. ಶಾಮಣ್ಣ ಮತ್ತು ಸುಮಾ ಮಕ್ಕಳು ಶಾಲೆಯಿಂದ ಬಂದ ನಂತರ ಘಟನೆ ಹೊರ ಬಂದಿದೆ.
ಶಾಮಣ್ಣ ಮತ್ತು ಸುಮಾ ಇಬ್ಬರ ನಡುವೆ ಕೌಟುಂಬಿಕ ಕಲಹ ಸಾಕಷ್ಟು ದಿನಗಳಿಂದ ನಡೆಯುತ್ತಿದ್ದು, ಇದು ಅತಿರೇಕಕ್ಕೆ ಹೋಗಿ ಜಗಳ ಉಂಟಾಗಿ ಇಬ್ಬರ ಪ್ರಾಣ ಹೋಗಿದೆ. ಇನ್ನೂ ಇಬ್ಬರೂ ಗಂಡು ಮಕ್ಕಳು ಇದ್ದು, ಗಂಡ ಹೆಂಡತಿ ಕಲಹಕ್ಕೆ ಮಕ್ಕಳು ಅನಾಥಾರಾಗಿದ್ದಾರೆ. ಸದ್ಯಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ವಿಜಯಪುರ ಪಟ್ಟಣದ ಹೊರವಲಯದಲ್ಲಿ ನಡೆದಿದ್ದು, ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದಿಂದ ವಿಜಯಪುರ ಪಟ್ಟಣದ ಬೆಚ್ಚಿ ಬಿದ್ದಿದೆ.
ಒಟ್ಟಾರೆ ಗಂಡ ಹೆಂಡತಿ ಜಗಳ ಹೆಂಡತಿ ಉಂಡು ಮಲಗೋ ವರೆಗೂ ಅಂತಾ ಇರಬೇಕು ಆದ್ರೆ ಮುಂದುವರೆದರೆ ವಿಕೋಪಕ್ಕೆ ತಲುಪುತ್ತದೆ. ಅದಕ್ಕೊಂದು ತಾಜಾ ಉದಾಹರಣೆ ಇಂದು ವಿಜಯಪುರ ಪಟ್ಟಣದಲ್ಲಿ ನಡೆದಿರುವ ಘಟನೆ. ಹೆಂಡತಿಯನ್ನ ಕೊಲೆ ಮಾಡಿ ಗಂಡ ಆತ್ಮಹತ್ಯೆ ಮಾಡಿಕೊಂಡಿರುವುದು ಅಸಲಿ ಸತ್ಯ ಪೋಲಿಸರ ತನಿಖೆಯಿಂದ ಹೊರಬರಬೇಕಾಗಿದೆ.
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…