ಹೆಂಡತಿಗೆ ಜಿಮ್ ಡಂಬಲ್ಸ್​ನಿಂದ ಹೊಡೆದು ಕೊಲೆ ಮಾಡಿ ನಂತರ ಗಂಡ ನೇಣಿಗೆ ಶರಣು

ಗಂಡ ಹೆಂಡತಿ ಜಗಳ ಉಂಡು ಮಲಗೋ ವರೆಗೆ ಅಂತಾ ಇರಬೇಕು. ಆದರೆ ಕೆಲವೊಂದು ಬಾರಿ ಗಂಡ ಹೆಂಡತಿ ಜಗಳ ಮಿತಿ ಮೀರಿದರೆ ಒಂದೊಂದು ಸಲ ಏನ್ ಆಗುತ್ತೋ ಅನ್ನೋದು ಊಹೆಗೆ ಸಿಕ್ಕುವುದಿಲ್ಲ. ಗಂಡ ಹೆಂಡತಿ ಜಗಳ ಮಾಡಿಕೊಳ್ಳುವ ಮುನ್ನ ಒಂದು ಸಲ ಅಲೋಚನೆ ಮಾಡಬೇಕು. ಆದ್ರೆ ಇಲ್ಲೊಂದು ಜೋಡಿ ಯಾವುದು ಯೋಚನೆ ಮಾಡ್ದೆ ದೊಡ್ಡದೊಂದು ಅನಾಚಾರ ನಡೆದು ಹೋಗಿದೆ..‌

ಸತ್ತು ಮಲಗಿರುವ ಗಂಡ.. ರಕ್ತದ ಮಡುವಿನಲ್ಲಿ ಬಿದ್ದಿರುವ ಹೆಂಡತಿ.. ಘಟನೆ ಸ್ಥಳದಲ್ಲಿ ಇಂಚು ಇಂಚು ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು…. ಈ ಎಲ್ಲಾ ದೃಶ್ಯಗಳು ಕಂಡು ಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ಕಂಡು ಬಂದಿದ್ದು..

ಹೌದು ಗಂಡ ಮೊದಲು ಹೆಂಡತಿಯನ್ನ ಜಿಮ್ ಡಂಬಲ್ಸ್ ನಿಂದ ಹೊಡೆದು ಕೊಲೆ ಮಾಡಿದ್ದಾನೆ ನಂತರ ಕಾರಣಾಂತರಗಳಿಂದ ಗಂಡ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಜಯಪುರ ಪಟ್ಟಣದ ಬಸವಚಾರಿ ಅಲಿಯಾಸ್ ಶಾಮ್ (40) ಮತ್ತು ಸುಮಾ (35) ಮೃತ ದುರ್ದೈವಿಗಳು. ಶಾಮಣ್ಣ ಮತ್ತು ಸುಮಾ ಮಕ್ಕಳು ಶಾಲೆಯಿಂದ ಬಂದ ನಂತರ ಘಟನೆ ಹೊರ ಬಂದಿದೆ.

ಶಾಮಣ್ಣ ಮತ್ತು ಸುಮಾ ಇಬ್ಬರ ನಡುವೆ ಕೌಟುಂಬಿಕ ಕಲಹ ಸಾಕಷ್ಟು ದಿನಗಳಿಂದ ನಡೆಯುತ್ತಿದ್ದು, ಇದು ಅತಿರೇಕಕ್ಕೆ ಹೋಗಿ ಜಗಳ‌ ಉಂಟಾಗಿ ಇಬ್ಬರ ಪ್ರಾಣ ಹೋಗಿದೆ. ಇನ್ನೂ ಇಬ್ಬರೂ ಗಂಡು ಮಕ್ಕಳು ಇದ್ದು, ಗಂಡ ಹೆಂಡತಿ ಕಲಹಕ್ಕೆ ಮಕ್ಕಳು ಅನಾಥಾರಾಗಿದ್ದಾರೆ. ಸದ್ಯಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್ಪಿ ಸಿ.ಕೆ ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌.

ಈ ಘಟನೆ ವಿಜಯಪುರ ಪಟ್ಟಣದ ಹೊರವಲಯದಲ್ಲಿ ನಡೆದಿದ್ದು, ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಪ್ರಕರಣದಿಂದ ವಿಜಯಪುರ ಪಟ್ಟಣದ ಬೆಚ್ಚಿ ಬಿದ್ದಿದೆ.

ಒಟ್ಟಾರೆ ಗಂಡ ಹೆಂಡತಿ ಜಗಳ ಹೆಂಡತಿ ಉಂಡು ಮಲಗೋ ವರೆಗೂ ಅಂತಾ ಇರಬೇಕು ಆದ್ರೆ ಮುಂದುವರೆದರೆ ವಿಕೋಪಕ್ಕೆ ತಲುಪುತ್ತದೆ. ಅದಕ್ಕೊಂದು ತಾಜಾ ಉದಾಹರಣೆ ಇಂದು ವಿಜಯಪುರ ಪಟ್ಟಣದಲ್ಲಿ ನಡೆದಿರುವ ಘಟನೆ. ಹೆಂಡತಿಯನ್ನ ಕೊಲೆ ಮಾಡಿ ಗಂಡ ಆತ್ಮಹತ್ಯೆ ಮಾಡಿಕೊಂಡಿರುವುದು ಅಸಲಿ ಸತ್ಯ ಪೋಲಿಸರ ತನಿಖೆಯಿಂದ ಹೊರಬರಬೇಕಾಗಿದೆ.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

11 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

15 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

16 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

24 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

2 days ago